ಬ್ರೇಕಿಂಗ್ ನ್ಯೂಸ್
12-12-24 08:40 pm Mangalore Correspondent ಕರಾವಳಿ
ಮಂಗಳೂರು, ಡಿ.12: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಂಗಾಪುರಕ್ಕೆ ನೇರ ವಿಮಾನ ಸೇವೆ ಆರಂಭಗೊಂಡಿದೆ. 2025ರ ಜನವರಿ 21ರಿಂದ ಏರ್ ಇಂಡಿಯಾ ಈ ಹೊಸ ಸೇವೆಯನ್ನು ಆರಂಭಿಸಲಿದ್ದು, ಆಮೂಲಕ ಸೌದಿ, ಗಲ್ಫ್ ರಾಷ್ಟ್ರಕ್ಕೆ ಬಿಟ್ಟರೆ ಸೌತ್ ಏಷ್ಯಾದ ಮತ್ತೊಂದು ರಾಷ್ಟ್ರಕ್ಕೆ ಮಂಗಳೂರಿನಿಂದ ನೇರ ವಿಮಾನ ಆರಂಭಗೊಂಡಂತಾಗಿದೆ.
ಇದೇ ವೇಳೆ, ರಾಜಧಾನಿ ದೆಹಲಿ ಮತ್ತು ಮಹಾರಾಷ್ಟ್ರದ ಪುಣೆಗೂ ಮಂಗಳೂರಿನಿಂದ ಮತ್ತೆರಡು ವಿಮಾನ ಸೇವೆ ಆರಂಭಿಸಲಾಗಿದೆ. ಜನವರಿ 2ರಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಡಲಿದ್ದು, ವಾರದಲ್ಲಿ ಮೂರು ಬಾರಿ ಸೇವೆ ಇರಲಿದೆ. ಇದಲ್ಲದೆ, ದೆಹಲಿಗೆ ಮತ್ತೊಂದು ಇಂಡಿಗೋ ವಿಮಾನ ಡೈಲಿ ಸೇವೆಗೆ ಮುಂದಾಗಿದೆ. ಈಗಾಗಲೇ ಪ್ರತಿದಿನ ಸಂಜೆ ದೆಹಲಿಗೆ ಇಂಡಿಗೋ ವಿಮಾನವಿದ್ದು, ಫೆ.1ರಿಂದ ಮತ್ತೊಂದು ವಿಮಾನ ಹಾರಲಿದೆ.

ಸಿಂಗಾಪುರಕ್ಕೆ ತೆರಳುವ ಏರ್ ಇಂಡಿಯಾ ವಿಮಾನವು ವಯಾ ದೆಹಲಿ ಮೂಲಕ ತೆರಳಲಿದ್ದು, ಆಮೂಲಕ ಬೆಳಗ್ಗೆ ಮತ್ತು ಸಂಜೆ ದೆಹಲಿಗೆ ಮಂಗಳೂರಿನಿಂದ ನೇರ ವಿಮಾನ ಸೇವೆ ಸಿಕ್ಕಂತಾಗಿದೆ. ಇದರಿಂದ ವ್ಯವಹಾರ ನಿಮಿತ್ತ ದೆಹಲಿ, ಸಿಂಗಾಪುರಕ್ಕೆ ಪ್ರಯಾಣಿಸುವವರಿಗೆ ಉತ್ತಮ ಸೇವೆ ಸಿಗಲಿದೆ. ಮಂಗಳೂರಿನಿಂದ ಸಿಂಗಾಪುರಕ್ಕೆ ಬೆಳಗ್ಗೆ 5.55ಕ್ಕೆ ವಿಮಾನ ಹೊರಡಲಿದ್ದು, ಮಧ್ಯಾಹ್ನ 1.25ಕ್ಕೆ(ಅಲ್ಲಿನ ಸಮಯ) ಸಿಂಗಾಪುರ ತಲುಪಲಿದೆ. ಸಿಂಗಾಪುರದಿಂದ ಮಧ್ಯಾಹ್ನ 2.25ಕ್ಕೆ ಹೊರಟು ಸಂಜೆ 4.55ಕ್ಕೆ ಮಂಗಳೂರು ತಲುಪಲಿದೆ ಎಂದು ಮಂಗಳೂರು ಏರ್ಪೋರ್ಟ್ ಪ್ರಕಟಣೆ ತಿಳಿಸಿದೆ.
ವಿದೇಶಿ ವಿಮಾನಗಳು ಮಂಗಳೂರಿಗೆ ಬರಲ್ಲ
ಮಂಗಳೂರು ವಿಮಾನ ನಿಲ್ದಾಣವು ಟೇಬಲ್ ಟಾಪ್ ಅಂದರೆ, ಎತ್ತರದ ಗುಡ್ಡ ಪ್ರದೇಶದಲ್ಲಿರುವುದರಿಂದ ದೊಡ್ಡ ಗಾತ್ರದ ವಿದೇಶಿ ವಿಮಾನಗಳು ಬರುವುದಿಲ್ಲ. ಇಲ್ಲಿ ಲ್ಯಾಂಡ್ ಆಗುವುದು ಕಷ್ಟವಾಗಿದ್ದರಿಂದ ಪರಿಣತ ಪೈಲಟ್ಗಳು ಮಾತ್ರ ಮಂಗಳೂರಿನಲ್ಲಿ ವಿಮಾನ ಇಳಿಸುತ್ತಾರೆ. ಬೋಯಿಂಗ್ ಮಾದರಿಯ ದೊಡ್ಡ ವಿಮಾನಗಳು ಮಂಗಳೂರಿಗೆ ಬರುವುದಕ್ಕೆ ನಿರಾಕರಿಸುತ್ತವೆ. ಹೀಗಾಗಿ ವಿದೇಶಕ್ಕೆ ನೇರ ವಿಮಾನ ಯಾನ ಸವಾಲಾಗಿದ್ದು, ಕೇವಲ ಭಾರತದ ಇಂಡಿಗೋ ಮತ್ತು ಏರ್ ಇಂಡಿಯಾ ಮಾತ್ರ ಮಂಗಳೂರಿನಿಂದ ಬೇರೆ ಕಡೆಗಳಿಗೆ ವಿಮಾನ ಸೇವೆ ನೀಡುತ್ತಿದೆ. ಬಜ್ಪೆ ಬದಲು ಕೊಣಾಜೆ ಇನ್ನಿತರ ಭಾಗದಲ್ಲಿ ಏರ್ಪೋರ್ಟ್ ಇರುತ್ತಿದ್ದರೆ, ಈಗಾಗಲೇ ವಿದೇಶಿ ವಿಮಾನಗಳು ಬರುತ್ತಿದ್ದವು. ಬೆಂಗಳೂರು ಮಾದರಿಯಲ್ಲಿ ಏರ್ಪೋರ್ಟ್ ಹೆಚ್ಚು ಅಭಿವೃದ್ಧಿಯೂ ಆಗುತ್ತಿತ್ತು ಎನ್ನುವುದು ಪ್ರಯಾಣಿಕರ ಅಭಿಮತ.
In a major boost to international air connectivity, Mangaluru International Airport is set to connect to its first-ever Southeast Asian destination with direct flights to Singapore starting January 21, 2025. Operated by Air India Express.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm