ಬ್ರೇಕಿಂಗ್ ನ್ಯೂಸ್
16-12-24 11:55 am Mangalore Correspondent ಕರಾವಳಿ
ಉಳ್ಳಾಲ, ಡಿ.16: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರ ಸ್ನಾನಕ್ಕಿಳಿದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ. ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಇತ್ತೀಚಿಗೆ ನಿಧನರಾಗಿದ್ದು ಇಂದು ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡಪ್ರದಾನ ನೆರವೇರಿಸಿದ ಬಳಿಕ ಉಷಾ ಅವರು ಸಮುದ್ರ ಸ್ನಾನ ಮಾಡಲು ತೆರಳಿದ್ದು ಕಾಲು ಜಾರಿ ಸಂಬಂಧಿಗಳು ನೋಡುತ್ತಿದ್ದಂತೆಯೇ ಸಮುದ್ರ ಪಾಲಾಗಿದ್ದಾರೆ.

ಸ್ಥಳೀಯರು ಮತ್ತು ನಾಡದೋಣಿಗರು ಸಮುದ್ರಕ್ಕೆ ಧುಮುಕಿ ಉಷಾ ಅವರನ್ನ ತೀರಕ್ಕೆ ಎಳೆದಿದ್ದು,ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು
ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಾಸಿದ್ದಾರೆ.
ಉಷಾ ಅವರು ಎನ್ಎಮ್ ಪಿಟಿಯಲ್ಲಿ ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಸೆಕ್ರೆಟರಿ ಆಗಿ ನಿವೃತ್ತರಾಗಿದ್ದರು. ಅವರು ಪುತ್ರಿಯನ್ನ ಅಗಲಿದ್ದಾರೆ.
ಶಾಶ್ವತ ಜೀವರಕ್ಷಕ ಸಿಬ್ಬಂದಿಗಳಿಲ್ಲ ;
ಸೋಮೇಶ್ವರ ಕಡಲ ತೀರಕ್ಕೆ ನಿತ್ಯವೂ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹಾಗಿದ್ದರೂ ಪ್ರವಾಸೋದ್ಯಮ ಇಲಾಖೆಯು ಇಲ್ಲಿ ಶಾಶ್ವತ ಜೀವರಕ್ಷಕ ಸಿಬ್ಬಂದಿಯನ್ನ ನಿಯೋಜಿಸಿಲ್ಲ. ಕರಾವಳಿ ಕಾವಲು ಪಡೆಯ ಅರೆಕಾಲಿಕ ಜೀವರಕ್ಷಕ ಸಿಬ್ಬಂದಿಗಳು ಸೋಮೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಅನೇಕರ ಪ್ರಾಣ ರಕ್ಷಿಸಿದ್ದಾರೆ. ಶಾಶ್ವತವಾಗಿ ಇಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸಿದಲ್ಲಿ ಸಮದ್ರ ತೀರದಲ್ಲಿ ನಡೆಯುವ ಪ್ರಾಣಹಾನಿಗಳನ್ನ ತಪ್ಪಿಸಬಹುದಾಗಿದೆ.
Mangalore Someshwara 72 year old women drowned in sea while performing Pinda pradana. The deceased has been identified as Usha from Derebail.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm