ಬ್ರೇಕಿಂಗ್ ನ್ಯೂಸ್
17-12-24 01:55 pm Mangaluru correspondent ಕರಾವಳಿ
ಮಂಗಳೂರು, ಡಿ.17: ಜನಪರ ಸಂಘಟನೆಗಳು ಹಮ್ಮಿಕೊಳ್ಳುವ ಧರಣಿ, ಪ್ರತಿಭಟನೆಗಳಿಗೆ ನಿಯಮಗಳನ್ನು ಮೀರಿ ನಿರ್ಬಂಧ ಹೇರುವ, ಹೋರಾಟಗಾರರ ಮೇಲೆ ದುರುದ್ದೇಶದಿಂದ ಎಫ್ಐಆರ್ ದಾಖಲಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಅಮಾನತುಗೊಳಿಸಬೇಕು, ಅವರ ಮೇಲಿನ ಆರೋಪಗಳ ಕುರಿತು ಇಲಾಖಾ ತನಿಖೆ ಕೈಗೊಳ್ಳಬೇಕು, ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿ ಡಿಸೆಂಬರ್ 23 ರಂದು ಬೆಳಗ್ಗೆ 10 ರಿಂದ ಅಪರಾಹ್ನ 1 ಗಂಟೆ ವರೆಗೆ ಬೃಹತ್ ಸಾಮೂಹಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ಪ್ರಕಟನೆಯಲ್ಲಿ ತಿಳಿಸಿದೆ.
ಕಮಿಷನರ್ ಅಗರ್ವಾಲ್ ಜನಪರ ಸಂಘಟನೆಗಳು, ಜನ ಸಾಮಾನ್ಯರ ಬೇಡಿಕೆಗಳ ಮೇಲಿನ ಹೋರಾಟಗಳ ಕುರಿತು ಪೂರ್ವಾಗ್ರಹಗಳನ್ನು ಹೊಂದಿದ್ದಾರೆ, ತಿರಸ್ಕಾರ ಮನೋಭಾವವನ್ನು ಪ್ರದರ್ಶಿಸುತ್ತಿದ್ದಾರೆ. ನೆಪಗಳನ್ನು ಮುಂದಿಟ್ಟು ಧರಣಿ, ಪ್ರತಿಭಟನೆಗಳಿಗೆ ಅನುಮತಿ ನಿರಾಕರಿಸುತ್ತಿದ್ದಾರೆ. ಸರಕಾರದ ಯಾವುದೇ ಆದೇಶ ಇಲ್ಲದಿದ್ದರೂ ಧರಣಿ, ಪ್ರತಿಭಟನೆಗಳು ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಮಾತ್ರ ನಡೆಸಬೇಕು ಎಂದು ಸರ್ವಾಧಿಕಾರಿಯಂತೆ ಆದೇಶಿಸುತ್ತಿದ್ದಾರೆ.
ಧರಣಿ ನಿರತರ ಮೇಲೆ ಎಫ್ಐಆರ್ ಗಳನ್ನು ಹಾಕುತ್ತಿದ್ದಾರೆ. ಮತ್ತು ಇಂತಹ ನಿರ್ಬಂಧಗಳು, ನಿಷೇಧಗಳನ್ನು ಜನಪರ, ಜಾತ್ಯತೀತ ಸಂಘಟನೆಗಳಿಗಷ್ಟೆ ಸೀಮಿತಗೊಳಿಸುತ್ತಿದ್ದಾರೆ. ಬಲಪಂಥೀಯ ಸಂಘಟನೆಗಳಿಗೆ ಇಂತಹ ಯಾವುದೇ ನಿರ್ಬಂಧಗಳನ್ನು ವಿಧಿಸದೆ ಬಹಿರಂಗ ತಾರತಮ್ಯ ಅನುಸರಿಸುತ್ತಿದ್ದಾರೆ. ಇದಲ್ಲದೆ, ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ, ಜೂಜು, ಗ್ಯಾಂಬ್ಲಿಂಗ್ ಗಳಿಗೆ ಮುಕ್ತ ಅವಕಾಶ ಒದಗಿಸಿದ್ದಾರೆ.
ಇಂತಹ ಜನ ವಿರೋಧಿ, ಸರ್ವಾಧಿಕಾರಿ ಪೊಲೀಸ್ ಕಮೀಷನರ್ ರನ್ನು ತಕ್ಷಣ ಅಮಾನತುಗೊಳಿಸಿ ತನಿಖೆಗೆ ಒಳಪಡಿಸಬೇಕು ಎಂದು ಹಲವು ಹಂತದ ಹೋರಾಟಗಳನ್ನು ನಡೆಸಲಾಗಿದೆ. ಆದರೂ, ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಹೋರಾಟ ತೀವ್ರಗೊಳಿಸಲು ಜಂಟಿ ವೇದಿಕೆ ತೀರ್ಮಾನಿಸಿದೆ. ಅದರ ಭಾಗವಾಗಿ ಡಿಸೆಂಬರ್ 23 ರಂದು ಮಂಗಳೂರು ಮಿನಿ ವಿಧಾನಸೌಧದ ಮುಂಭಾಗ ದಲಿತ, ರೈತ, ಕಾರ್ಮಿಕ. ಮಹಿಳಾ, ಯುವಜನ ಸಂಘಟನೆಗಳೂ ಒಳಗೊಂಡು ಇಪ್ಪತ್ತೈದಕ್ಕೂ ಹೆಚ್ಚು ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ, ಜಿಲ್ಲೆಯ ಎಲ್ಲ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ತಿಳಿಸಿದೆ.
Massive protest to be held against mangalore police commissioner Anupam Agarwal on Dec 23 by Like Minded organisation's demanding his suspension. IPS Anupam Agarwa has been alleged of corruption and Hitler rule by Dfyi. The organisation's now demand enquiry against commissioner.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am