ಬ್ರೇಕಿಂಗ್ ನ್ಯೂಸ್
22-12-24 11:03 pm Mangalore Correspondent ಕರಾವಳಿ
ಮಂಗಳೂರು, ಡಿ.22: ತಾನು ಲೋಕಾಯುಕ್ತ ಅಧಿಕಾರಿಯೆಂದು ಹೇಳಿ ಫೋನ್ ಮಾಡಿ, ಪ್ರಕರಣವನ್ನು ಹಣ ಕೊಟ್ಟರೆ ಮುಗಿಸುತ್ತೇನೆಂದು ನಂಬಿಸಿ ಹಣ ಪೀಕಿಸಲು ಯತ್ನಿಸಿದ ಘಟನೆ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
2024ರ ಎಪ್ರಿಲ್ 6ರಂದು ಸೋಮೇಶ್ವರ ಪುರಸಭೆಯ ರೆವಿನ್ಯೂ ಅಧಿಕಾರಿ ಪುರುಷೋತ್ತಮ ಎಂಬವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ತಾನು ಮಂಗಳೂರು ಲೋಕಾಯುಕ್ತ ಇಲಾಖೆಯ ಅಧಿಕಾರಿ ಪ್ರಭಾಕರ ಎಂದು ಪರಿಚಯಿಸಿದ್ದ. ನಿಮ್ಮ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದು ಟೆಕ್ನಿಕಲ್ ಟೀಮ್ ಬರುವ ಮೊದಲು ಮಾತನಾಡಿ ಮುಗಿಸಿ ಬಿಡುವುದಾದರೆ ಮಾತುಕತೆ ಮಾಡಿ ಎಂದು ಹೇಳಿದ್ದ. ಪುರುಷೋತ್ತಮ ಅವರು ಮಂಗಳೂರು ಲೋಕಾಯುಕ್ತದಲ್ಲಿ ವಿಚಾರಿಸಿದಾಗ ಪ್ರಭಾಕರ ಎಂಬ ವ್ಯಕ್ತಿ ಇಲ್ಲವೆಂದು ತಿಳಿದುಬಂದಿತ್ತು. ಟ್ರು ಕಾಲರ್ ನಲ್ಲಿ ಪ್ರಭಾಕರ, ಲೋಕಾಯುಕ್ತ ಪಿಐ ಎಂದು ತೋರಿಸಿತ್ತು.
ಪುರಸಭೆಯಲ್ಲಿ ಆರೋಗ್ಯ ಇಲಾಖೆಯ ಇತರ ಅಧಿಕಾರಿಗಳಾದ ಲಿಲ್ಲಿ ನಾಯರ್ ಮತ್ತು ಕೃಷ್ಣ ಅವರಿಗು ಇದೇ ರೀತಿ ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಅನುಮಾನಗೊಂಡ ಪುರುಷೋತ್ತಮ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ನಡೆಸಿದ್ದರು. ಇದೀಗ ಆರೋಪಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ನಿವಾಸಿ ಧನಂಜಯ ರೆಡ್ಡಿ ತೋಟಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಇದೇ ಮಾದರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಠಾಣೆ ಮತ್ತು ಹೈದರಾಬಾದ್ ನಗರದ ಶಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ಕೀಳಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಎಸಿಪಿ ಧನ್ಯ ನಾಯಕ್ ಸೂಚನೆಯಂತೆ ಉಳ್ಳಾಲ ಪಿಎಸ್ಐ ಸಂತೋಷ್ ಕುಮಾರ್ ಮತ್ತು ಸಿಬಂದಿ ತಾಂತ್ರಿಕ ಸಾಕ್ಷ್ಯದಿಂದ ಆರೋಪಿಯನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.
Mangalore Andhra native arrested by ullal police after posing as Lokayukta officer. The arrested has been identified as Dhananajaya Reddy.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am