ಬ್ರೇಕಿಂಗ್ ನ್ಯೂಸ್
14-12-20 10:52 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ಸಂದರ್ಭಗಳಲ್ಲಿ ತುರ್ತು ಸೇವೆಗಾಗಿ ದೇಶದಾದ್ಯಂತ ಜಾರಿಗೊಳ್ಳುತ್ತಿರುವ 112 ತುರ್ತು ಸಹಾಯವಾಣಿ ಸೇವೆಗೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲೂ ಚಾಲನೆ ನೀಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸೋಮವಾರ ತಮ್ಮ ಕಚೇರಿ ಎದುರು 112 ತುರ್ತು ಸೇವೆಗೆ ನಿಯೋಜನೆಗೊಂಡಿರುವ 19 ವಾಹನಗಳಿಗೆ ಹಸಿರು ನಿಶಾನೆ ನೀಡಿದರು.
ದೇಶದಲ್ಲಿ ಒಂದೇ ತುರ್ತು ಕರೆ ಸಂಖ್ಯೆ ‘112’ ಜಾರಿಗೊಳ್ಳುತ್ತಿದೆ. ಅದರಂತೆ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲೂ ಈ ಸೇವೆಗೆ ಚಾಲನೆ ನೀಡಲಾಗಿದೆ. ರವಿವಾರದಂದೇ ಸೇವೆ ಆರಂಭಗೊಂಡಿದ್ದು ಸೋಮವಾರ ಅಧಿಕೃತ ಚಾಲನೆ ನೀಡಲಾಗಿದೆ. ರವಿವಾರ ತುರ್ತು ಸೇವೆಗೆ 24 ಕರೆಗಳು ಬಂದಿದ್ದು ತುರ್ತಾಗಿ ಸ್ಪಂದಿಸಲಾಗಿದೆ ಎಂದು ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.

ತುರ್ತು ಸಂದರ್ಭಗಳಿಗೆ 100ಗೆ ಕರೆ ಮಾಡಿದರೆ ಸೇವೆ ದೊರೆಯುತ್ತಿತ್ತು. ಮುಂದೆ 112ಗೆ ಕರೆ ಮಾಡಿದರೆ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ತುರ್ತು ಸೇವೆಗಳು ದೊರೆಯಲಿವೆ. 100ಕ್ಕೆ ಕರೆ ಮಾಡಿದರೂ ಇದು 112 ಸಂಖ್ಯೆಗೆ ಸಂಪರ್ಕಗೊಂಡು ಸೇವೆ ದೊರೆಯುತ್ತದೆ ಎಂದರು.
ಅತ್ಯಂತ ಕಡಿಮೆ ಅವಧಿಯಲ್ಲಿ ಸೇವೆ ಒದಗಿಸುವುದು ಇದರ ಉದ್ದೇಶ. ತುರ್ತು ಸಂದರ್ಭದಲ್ಲಿ ಕರೆ ಮಾಡಿದಾಗ ಬೆಂಗಳೂರಿನಲ್ಲಿರುವ ನಿಯಂತ್ರಣ ಕೊಠಡಿಗೆ ಮಾಹಿತಿ ಹೋಗಿ ಅಲ್ಲಿಂದ ಜಿಪಿಎಸ್ ಆಧಾರದಲ್ಲಿ ಸಹಾಯ ಬೇಕಿರುವ ಪ್ರದೇಶದಲ್ಲಿರುವ ಸಹಾಯವಾಣಿ ವಾಹನ/ ಪೊಲೀಸ್ ತಂಡಕ್ಕೆ ತಕ್ಷಣ ಮಾಹಿತಿ ರವಾನೆಯಾಗುತ್ತದೆ. ಅಗ್ನಿಶಾಮಕ ಮತ್ತಿತರ ವಿಪತ್ತು ನಿರ್ವಹಣಾ ತಂಡಗಳಿಗೆ ಸಂಬಂಧಿಸಿದ ಮಾಹಿತಿ ಕೂಡ ಕೂಡಲೇ ಆಯಾ ವಿಭಾಗಗಳಿಗೆ ಹೋಗುತ್ತದೆ. ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ರವಾನೆಯಾಗುತ್ತದೆ ಎಂದು ಆಯುಕ್ತರು ಮಾಹಿತಿ ನೀಡಿದರು.
ತುರ್ತು ಸೇವೆಯು ದಿನದ 24 ಗಂಟೆಯೂ ದೊರೆಯಲಿದ್ದು, ಸಿಬ್ಬಂದಿ ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ಗರಿಷ್ಠ 15ರಿಂದ 30 ನಿಮಿಷಗಳೊಳಗೆ ಸೇವೆ ಒದಗಿಸುವುದು ಇದರ ಉದ್ದೇಶ. ಸ್ಥಳ ಸಮೀಪದಲ್ಲಿದ್ದರೆ ಹೆಚ್ಚು ಬೇಗನೆ ಸೇವೆ ದೊರೆಯಲಿದೆ ಎಂದು ವಿಕಾಸ್ ಕುಮಾರ್ ತಿಳಿಸಿದರು.
ತುರ್ತು ಸೇವೆಗೆ ನಿಯೋಜನೆಗೊಂಡ 19 ವಾಹನಗಳು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರ್ಯಾಲಿ ನಡೆಸಿದವು. ಡಿಸಿಪಿಗಳಾದ ವಿನಯ ಗಾಂವ್ಕರ್, ಹರಿರಾಮ್ ಶಂಕರ್, ಸಂಚಾರ ವಿಭಾಗದ ಎಸಿಪಿಗಳಾದ ಎಂ.ಎ. ನಟರಾಜ್ ಉಪಾಸೆ, ಇನ್ಸ್ಪೆಕ್ಟರ್ ರಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.
Mangaluru city police commissioner Vikash Kumar Vikash on Monday, December 14 launched single emergency helpline number '112' under the Emergency Response Support System.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm