ಬ್ರೇಕಿಂಗ್ ನ್ಯೂಸ್
25-12-24 10:55 pm Mangalore Correspondent ಕರಾವಳಿ
ಮಂಗಳೂರು, ಡಿ.25: ಇಸ್ರೇಲ್ ಮೂಲದ ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಡಿಜೆ ಪ್ಲೇಯರ್ ಸಜಂಕಾ ಮಂಗಳೂರಿಗೆ ಬರಲಿದ್ದು, ಹೊಸ ವರ್ಷದ ಪ್ರಯುಕ್ತ ಡಿ.27ರಂದು ಬೋಳಾರದ ಸಿಟಿ ಬೀಚ್ ನಲ್ಲಿ ಡಿಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆದರೆ ಈ ಕಾರ್ಯಕ್ರಮಕ್ಕೆ ವಿಎಚ್ ಪಿ, ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದು ಇಸ್ರೇಲಿ ವ್ಯಕ್ತಿಯ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಪೊಲೀಸರಿಗೆ ದೂರು ನೀಡಿದೆ.
ಸಜಂಕಾ (ಮೂಲ ಹೆಸರು ಅವಿಶೈ ಗ್ರಿನ್ ಬಾಮ್) ಭಾರತದಲ್ಲಿ ಈ ಬಾರಿ ಹಲವು ಕಡೆ ನ್ಯೂ ಇಯರ್ ಪಾರ್ಟಿಗಳಲ್ಲಿ ಭಾಗವಹಿಸಲಿದ್ದಾರೆ. ಯುವ ಗಾಯಕ ಮತ್ತು ಡಿಜೆ ಪಾರ್ಟಿ ಮ್ಯುಜೀಶಿಯನ್ ಆಗಿರುವ ಸಜಂಕಾ ವಿಭಿನ್ನ ಶೈಲಿಯ ಮ್ಯೂಸಿಕ್ ನೀಡುವುದರಲ್ಲಿ ಫೇಮಸ್ ಆಗಿದ್ದಾರೆ. ಭಾರತೀಯ ಶೈಲಿಯ ಪ್ರಸಿದ್ಧ ಹಾಡುಗಳಿಗೂ ಪಾಪ್ ಮಾದರಿಯಲ್ಲಿ ಸಂಗೀತ ಸಂಯೋಜಿಸಿ ಹಾಡಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿದ್ದು ಯುವಕರನ್ನು ಆಕರ್ಷಿಸಿದೆ.
ಇದೇ ಕಾರಣಕ್ಕೆ ಮಂಗಳೂರಿನ ಟಾಪ್ ಹೌಸ್ ರೆಸ್ಟೋರೆಂಟ್ ಮಾಲೀಕರು ಸಜಂಕಾ ಅವರನ್ನು ಮೊದಲ ಬಾರಿಗೆ ಇಲ್ಲಿಗೆ ಕರೆಸುತ್ತಿದ್ದು, ಸಿಟಿ ಬೀಚ್ ನಲ್ಲಿ ಭಾರೀ ವೆಚ್ಚದಲ್ಲಿ ಡಿಜೆ ಪಾರ್ಟಿ ಆಯೋಜಿಸಿದ್ದಾರೆ. ಇದಕ್ಕಾಗಿ ದುಬಾರಿ ಟಿಕೆಟ್ ಅನ್ನೂ ನೀಡುತ್ತಿದ್ದು, ಜಾಲತಾಣದಲ್ಲಿ ಬುಕ್ಕಿಂಗ್ ಆರಂಭಗೊಂಡಿದೆ. ಇದೇ ವೇಳೆ, ಸಜಂಕಾ ಡಿಜೆ ಪಾರ್ಟಿಗೆ ಬಜರಂಗದಳ ಯುವಕರು ವಿರೋಧ ವ್ಯಕ್ತಪಡಿಸಿದ್ದು, ಆತ ಭಾರತೀಯ ದೇವರುಗಳ ಬಗ್ಗೆ, ದೇವರ ಹಾಡುಗಳ ಬಗ್ಗೆ ವಿಚಿತ್ರವಾಗಿ ವಿಡಂಬಿಸಿದ್ದಾನೆ. ಆ ಮೂಲಕ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾನೆ. ಇಂಥ ವ್ಯಕ್ತಿಯ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಬಜರಂಗದಳ ಪ್ರಮುಖರು ಮಂಗಳೂರು ಸೆಂಟ್ರಲ್ ಎಸಿಪಿಗೆ ದೂರು ನೀಡಿ ಒತ್ತಾಯಿಸಿದ್ದಾರೆ.
Israel-based DJ artist Sajanka is in Mangalore for a New Year party. Bajrang Dal members and leaders have issued a letter to the police requesting the cancellation of the program, which is scheduled to be held at Beach House in Bolar on December 27th.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm