ಬ್ರೇಕಿಂಗ್ ನ್ಯೂಸ್
26-12-24 07:07 pm Udupi Correspondent ಕರಾವಳಿ
ಉಡುಪಿ, ಡಿ.26: ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿರುವ ಯೋಧ ಅನೂಪ್ ಪೂಜಾರಿ ಅವರಿಗೆ ಹುಟ್ಟೂರು ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು. ಸೇನಾ ವಿಮಾನದಲ್ಲಿ ನಿನ್ನೆ ಮಂಗಳೂರು ಏರ್ಪೋರ್ಟ್ ಬಂದಿದ್ದ ಪಾರ್ಥಿವ ಶರೀರವನ್ನು ನಸುಕಿನಲ್ಲಿ ಕುಂದಾಪುರಕ್ಕೆ ಒಯ್ಯಲಾಗಿತ್ತು. ಬೆಳಗ್ಗೆ 9 ಗಂಟೆಗೆ ತೆಕ್ಕಟ್ಟೆಯಿಂದ ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ, ಹುಟ್ಟೂರು ಬೀಜಾಡಿಗೆ ತರಲಾಗಿತ್ತು.
ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆದಿದ್ದು ಅಲ್ಲಿ ಕುಟುಂಬದ ಆಪ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ ಅವರು ಕಲಿತ ಬೀಜಾಡಿಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅನೂಪ್ ಪೂಜಾರಿ ಆಪ್ತರು, ಸಾರ್ವಜನಿಕರು, ಶಾಲಾ ಮಕ್ಕಳು, ಅಧಿಕಾರಿಗಳು, ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಿದರು. ಅನೂಪ್ ಅವರ ಅಂತಿಮ ದರ್ಶನಕ್ಕಾಗಿ ಸಾವಿರಾರು ಮಂದಿ ಬೀಜಾಡಿಯಲ್ಲಿ ಸೇರಿದ್ದರು. ಮೃತದೇಹವನ್ನು ಮನೆಗೆ ತಂದಾಗ ಬಂಧುಗಳ ರೋದನ ಮುಗಿಲು ಮುಟ್ಟಿತ್ತು.





ಸೇರಿದ್ದ ಜನರು ಭಾರತ್ ಮಾತಾ ಕಿ ಜೈ, ಅನೂಪ್ ಪೂಜಾರಿ ಅಮರ್ ರಹೇ ಘೋಷಣೆಗಳನ್ನು ಕೂಗಿದರು. ಅಗಲಿದ ಯೋಧನಿಗೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವ ಸಲ್ಲಿಸಲಾಯಿತು. ಸಮುದ್ರ ತೀರದ ಸರ್ಕಾರಿ ಜಮೀನಿನಲ್ಲಿ ಅನೂಪ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿತ್ತು. ಪತ್ನಿ ಮಂಜುಶ್ರೀಗೆ ಸೇನೆಯ ಹಿರಿಯ ಅಧಿಕಾರಿಗಳು ತ್ರಿವರ್ಣ ದ್ವಜ ಹಸ್ತಾಂತರಿಸಿದರು. ಮಧ್ಯಾಹ್ನ ವೇಳೆಗೆ ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅವರ ಅಂತ್ಯಸಂಸ್ಕಾರ ನಡೆಯಿತು.
ಅನೂಪ್ ಪಾರ್ಥಿವ ಶರೀರಕ್ಕೆ ಅವರ ಸಹೋದರ ಅಗ್ನಿ ಸ್ಪರ್ಶ ಮಾಡಿದರು. ಅಂತಿಮ ವಿಧಿ-ವಿಧಾನದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್ ಗಂಟೆಹೊಳೆ ಸೇರಿದಂತೆ ಜಿಲ್ಲಾಡಳಿತದ ಸಿಬಂದಿ, ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳು, ಸೇನಾ ಸಿಬ್ಬಂದಿ ಭಾಗಿಯಾಗಿದ್ದರು.
Lance Havaldar Anoop Poojary, who tragically died in an army vehicle accident in Poonch, Jammu and Kashmir, was laid to rest with full honours in his hometown of Beejady, Udupi district, on Thursday.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm