ಬ್ರೇಕಿಂಗ್ ನ್ಯೂಸ್
26-12-24 11:18 pm Mangalore Correspondent ಕರಾವಳಿ
ಉಳ್ಳಾಲ, ಡಿ.26: ಮಂಜನಾಡಿ ಗ್ರಾಮದ ಖಂಡಿಕ ಎಂಬಲ್ಲಿನ ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಿಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಾಯಿ ಮತ್ತು ಮೂರು ಮಕ್ಕಳಲ್ಲಿ ಕೆಲವು ದಿನಗಳ ಹಿಂದಷ್ಟೆ ತಾಯಿ ಸಾವನ್ನಪ್ಪಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹಿರಿಯ ಮಗಳು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ಝುಲೈಕ ಮೆಅದಿಯಾ(15) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾಳೆ. ಝುಲೈಕ ಮೊಂಟೆಪದವು ಸರ್ಕಾರಿ ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಡಿಸೆಂಬರ್ 8 ರಂದು ಮಂಜನಾಡಿ ಗ್ರಾಮದ ಖಂಡಿಕ ನಿವಾಸಿ ಮುತ್ತಲಿಬ್ ಅವರ ಮನೆಯಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟ ಸಂಭವಿಸಿತ್ತು.
ಘಟನೆಯಲ್ಲಿ ಕೊಠಡಿಯಲ್ಲಿ ಮಲಗಿದ್ದ ಮುತ್ತಲಿಬ್ ಅವರ ಪತ್ನಿ ಖುಬ್ರಾ, ಮಕ್ಕಳಾದ ಝುಲೈಕ ಮೆಅದಿಯಾ, ಮಾಝಿಯಾ ಮತ್ತು ಮಾಯಿದಾ ಸುಟ್ಟು ಗಂಭೀರ ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮುತ್ತಲಿಬ್ ಅವರ ಪತ್ನಿ ಖುಬ್ರಾ ಅವರು ಚಿಕಿತ್ಸೆ ಫಲಕಾರಿಯಾಗದೆ ಡಿ.13ರಂದು ಮೃತಪಟ್ಟಿದ್ದರು. ಇಂದು ಆಕೆಯ ಹಿರಿಯ ಮಗಳು ಝುಲೇಕ ಮೆಅದಿಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಮಕ್ಕಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
Mangalore Gas cylinder blast in Manjanady Death toll rises to two as teenager dies. In a tragic development related to the gas cylinder explosion that occurred on December 8 at Khandige in Manjanady village, a critically injured teenage girl has succumbed to her injuries, raising the death toll to two.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am