ಬ್ರೇಕಿಂಗ್ ನ್ಯೂಸ್
27-12-24 06:55 pm Mangalore Correspondent ಕರಾವಳಿ
ಮಂಗಳೂರು, ಡಿ.27: ಬೋಳಾರದ ಸಿಟಿ ಬೀಚ್ ನಲ್ಲಿ ಏರ್ಪಡಿಸಲಾಗಿದ್ದ ಇಸ್ರೇಲ್ ಮೂಲದ ಖ್ಯಾತ ಡಿಜೆ ಆರ್ಟಿಸ್ಟ್ ಸಜಂಕಾ ಡಿಜೆ ಪಾರ್ಟಿಯನ್ನು ಕೊನೆಕ್ಷಣದಲ್ಲಿ ರದ್ದು ಪಡಿಸಲಾಗಿದೆ. ಹಿಂದು ಸಂಘಟನೆಗಳ ವಿರೋಧ ಹಿನ್ನೆಲೆಯಲ್ಲಿ ಸಜಂಕಾ ಪಾರ್ಟಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ ಆಯೋಜಕರು ಸಜಂಕಾ ಬದಲು ಬೇರೆ ಆರ್ಟಿಸ್ಟ್ ಮೂಲಕ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದ್ದಾರೆ.
ಹೊಸ ವರ್ಷದ ಪ್ರಯುಕ್ತ ಮಂಗಳೂರಿನ ಟಾಪ್ ಹೌಸ್ ರೆಸ್ಟೋರೆಂಟ್ ಮಾಲೀಕರು ಅದ್ದೂರಿ ಡಿಜೆ ಪಾರ್ಟಿಯನ್ನು ಆಯೋಜಿಸಿದ್ದರು. ಡಿಜೆ ಪಾರ್ಟಿಗೆ ಇಸ್ರೇಲ್ ಮೂಲದ ಖ್ಯಾತ ಆರ್ಟಿಸ್ಟ್ ಸಜಂಕಾ ಬರುವುದೆಂದು ನಿಗದಿಯಾಗಿತ್ತು. ಹಿಂದು ಸಂಘಟನೆಗಳ ವಿರೋಧ ನಡುವೆಯೂ ಸಂಘಟಕರು ಮೇಲಿನ ಲೆವೆಲಲ್ಲಿ ಮಾತುಕತೆ ಮಾಡಿ ಡಿ.27ರ (ಇಂದು) ರಾತ್ರಿಗೆ ಪಾರ್ಟಿ ಆಯೋಜಿಸಿದ್ದರು.

ಆದರೆ ಡಿಜೆ ಪಾರ್ಟಿಯಲ್ಲಿ ಡ್ರಗ್ಸ್ ನೀಡಲಾಗುತ್ತದೆ, ಹಿಂದು ದೇವರ ಅಣಕಿಸುವ ಸಜಂಕಾಗೆ ಅವಕಾಶ ನೀಡಬಾರದು ಎಂದು ವಿಎಚ್ ಪಿ ಮತ್ತು ಬಜರನಂಗದಳ ಪೊಲೀಸರಿಗೆ ದೂರು ನೀಡಿತ್ತು. ಅಲ್ಲದೆ, ವಿಎಚ್ ಪಿ, ಬಜರಂಗದಳದಿಂದ ಜಾಲತಾಣದಲ್ಲಿಯೂ ಅಭಿಯಾನ ನಡೆದಿತ್ತು. ಸಜಂಕಾ ಪಾರ್ಟಿಯಲ್ಲಿ ಪಾಲ್ಗೊಂಡರೆ ಬಜರಂಗದಳದಿಂದ ಪ್ರತಿಭಟನೆ ನಡೆಸುವ ಬೆದರಿಕೆಯನ್ನೂ ಒಡ್ಡಿದ್ದರು. ಈ ಹಿನ್ನೆಲೆಯಲ್ಲಿ ಸಜಂಕಾ ಪಾಲ್ಗೊಳ್ಳುವುದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇತ್ತ ಸಜಂಕಾ ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದ್ದು ಪಾರ್ಟಿಗೆ ಹೋಗದೆ ಹೊಟೇಲಿನಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ.
ಇದೇ ವೇಳೆ, ಇಂದು ರಾತ್ರಿ ಆಯೋಜನೆಗೊಂಡಿದ್ದ ಡಿಜೆ ಪಾರ್ಟಿ ನಡೆಯುತ್ತದೆ. ಸಜಂಕಾ ಬದಲು ಬೇರೆಯವರನ್ನು ಕರೆಸಿಕೊಂಡಿದ್ದೇವೆ. ಮ್ಯೂಸಿಕ್ ಪ್ರಿಯರು ಬನ್ನಿ ಎಂದು ಟಾಪ್ ಹೌಸ್ ತಂಡ ಪೋಸ್ಟರ್ ಬಿಟ್ಟಿದೆ. ಮೊದಲ ಬಾರಿಗೆ ಮಂಗಳೂರಿನಲ್ಲಿ ಸಜಂಕಾ ಪಾರ್ಟಿ ಆಯೋಜಿಸಲಾಗಿತ್ತು. ವಿಭಿನ್ನ ಶೈಲಿಯ ಮ್ಯೂಸಿಕ್, ಭಾರತೀಯ ಹಾಡುಗಳನ್ನೂ ಪಾಪ್ ಶೈಲಿಗೆ ಸಂಯೋಜಿಸುವ ಸಜಂಕಾ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಇದೆ. ಈ ಬಾರಿ ಹೊಸ ವರ್ಷಕ್ಕೆ ಕೊಲ್ಕತ್ತಾ, ಮುಂಬೈನಲ್ಲಿಯೂ ಸಜಂಕಾ ಪಾರ್ಟಿ ಆಯೋಜನೆಯಾಗಿದೆ.
Mangalore DJ Sajanka party canceled at beach festival after opposition from Bajarang dal. Organisers have released a statement saying the entry of Dk Sajanka has been cancelled but the program with other DJs will be held.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm