ಬ್ರೇಕಿಂಗ್ ನ್ಯೂಸ್
29-12-24 11:08 pm Mangalore Correspondent ಕರಾವಳಿ
ಮಂಗಳೂರು, ಡಿ. 29: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಉಳಾಯಿಬೆಟ್ಟು ಗ್ರಾಮದ ಫೆರ್ಮಾಯ್ ಚರ್ಚ್ ಬಳಿಯ ನಿವಾಸಿ ಮನೋಹರ್ ಪಿರೇರಾ (47) ಅವರ ಮನೆಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಕುಟುಂಬಸ್ಥರ ಅಹವಾಲು ಆಲಿಸಿದ್ದಾರೆ.
ಮನೋಹರ್ ಪಿರೇರಾ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಾರಣ ಎಂದು ಹೇಳಿ ತಮ್ಮ ಕೊನೆಯ ವಾಟ್ಸಾಪ್ ವಿಡಿಯೋ ಮಾಡಿದ್ದರು. ತನ್ನ ಸಾಲವನ್ನು ಮರುಪಾವತಿಸಲು ನೀಡಿದ ಹಣವನ್ನು ಸಾಲಕ್ಕೆ ಜಮೆ ಮಾಡದೆ 9 ಲಕ್ಷ ರೂಪಾಯಿ ಯನ್ನು ಅನಿಲ್ ಲೋಬೊ ತಿಂದಿದ್ದಾನೆ ಎಂದು ಹೇಳಿದ್ದರು.



ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು ಪೊಲೀಸರು ಅನಿಲ್ ಲೋಬೊನನ್ನು ಬಂಧಿಸಿದ್ದರು.
ಮನೋಹರ್ ಪಿರೇರಾ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಪರಿಸರದ ನೂರಾರು ಮಂದಿ ಸಹಿಯನ್ನೊಳಗೊಂಡ ಮನವಿಯನ್ನು ರಾಜ್ಯದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿಗಳು, ಗೃಹ ಸಚಿವರು, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ರವರಿಗೆ ನೀಡಲಾಗಿತ್ತು.
ಮನವಿಗೆ ಸ್ಪಂದಿಸಿದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾoತ್ವನ ಹೇಳಿದ್ದಾರೆ. ನಿಷ್ಪಕ್ಷ ತನಿಖೆಗೆ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿರುತ್ತಾರೆ. ಎಂಸಿ ಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊನಿಂದ ತೊಂದರೆಗೊಳಗಾದ ಇತರ ಗ್ರಾಹಕರು ಸ್ಥಳದಲ್ಲಿ ಹಾಜರಿದ್ದು ತಮ್ಮ ಅಳಲನ್ನು ಯು.ಟಿ. ಖಾದರ್ ಬಳಿ ತೋಡಿಕೊಂಡರು. ಸ್ಥಳೀಯರು ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ಬಳಿ ದಿವಂಗತ ಮನೋಹರ್ ಅವರ ಬದುಕಿನ ಕಷ್ಟಗಳನ್ನು ವಿವರಿಸಿದರು. ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.
Mangalore Speaker UT Khader visits house of late Manohar Pereira Family in Anil Lobo MCC Bank suicide case offering his condolences and assuring them of an impartial investigation into the circumstances surrounding the tragedy. He also promised strict action against those found culpable.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm