ಬ್ರೇಕಿಂಗ್ ನ್ಯೂಸ್
31-12-24 10:40 pm Mangalore Correspondent ಕರಾವಳಿ
ಮಂಗಳೂರು, ಡಿ.31: ಕ್ರಿಸ್ತಿಯನ್ನರ ಪ್ರಕಾರ ಜನವರಿ 1ರ ಹೊಸ ವರ್ಷಕ್ಕೆ ಸಡಗರ. ಡಿ.31ರಂದು ವಿಶೇಷ ಪೂಜೆ ಮತ್ತು ಪವಿತ್ರ ದಿನ. ಕೆಥೋಲಿಕ್ ಕ್ರೈಸ್ತರ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊಗೆ ಮಾತ್ರ ಹೊಸ ವರ್ಷವೂ ಕಹಿಯಾಗುವ ಸಾಧ್ಯತೆ ಹೆಚ್ಚಿದೆ. ಸಾಲಗಾರನ ಆತ್ಮಹತ್ಯೆ ಪ್ರಕರಣದಲ್ಲಿ ಜಾಮೀನು ದೊರೆತಿಲ್ಲ. ಡಿ.31ರಂದು ನಡೆದ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಜನವರಿ 4ಕ್ಕೆ ಮುಂದೂಡಿದೆ.
ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, ಡಿ.30ರಂದು ವಿಚಾರಣೆ ನಡೆದು ಹೆಚ್ಚುವರಿ ಅರ್ಜಿ ಸಲ್ಲಿಕೆಯಾಗಿದ್ದರಿಂದ 31ಕ್ಕೆ ಮುಂದೂಡಿಕೆಯಾಗಿತ್ತು. ಮನೋಹರ್ ಪಿರೇರಾ ಕುಟುಂಬದ ಕಡೆಯಿಂದ ಅನಿಲ್ ಲೋಬೊಗೆ ಜಾಮೀನು ನೀಡಬಾರದು, ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುತ್ತಾನೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯನ್ನು ಪರಿಗಣಿಸಬಾರದೆಂದು ಪ್ರತಿವಾದಿ ವಕೀಲರು ವಾದಿಸಿದ್ದರೆ, ಇತ್ತ ಅರ್ಜಿ ಪರಿಗಣಿಸಬೇಕೆಂದು ಕುಟುಂಬದ ಕಡೆಯ ವಕೀಲರು ವಾದಿಸಿದ್ದಾರೆ.
ಡಿ.31ರ ಮಂಗಳವಾರ ಅರ್ಜಿಯನ್ನು ಪರಿಗಣಿಸಿದ ಕೋರ್ಟ್ ವಾದವನ್ನು ಆಲಿಸಲು ಒಪ್ಪಿಕೊಂಡಿದ್ದು ಜನವರಿ 4ಕ್ಕೆ ಮುಂದೂಡಿದೆ. ಇದೇ ವೇಳೆ, ಪೊಲೀಸರು ಪ್ರಕರಣದ ಸಾಕ್ಷ್ಯ ಸಂಗ್ರಹಿಸಲು ಮುಂದಾಗಿದ್ದು, ಆರೋಪಿಗೆ ಜಾಮೀನು ನೀಡದಂತೆ ಒತ್ತಡ ಹೇರುವ ಸಾಧ್ಯತೆಯಿದೆ. ಹೀಗಾಗಿ ಆರೋಪಿ ಅನಿಲ್ ಲೋಬೊಗೆ ಒಂದೆರಡು ವಾರಕ್ಕೆ ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎಂದೇ ಹೇಳಲಾಗುತ್ತಿದೆ. ಇತ್ತ ಅನಿಲ್ ಲೋಬೊಗೆ ಸರ್ಜರಿ ಅಗತ್ಯವಿದೆಯೆಂದು ನ್ಯಾಯಾಲಯಕ್ಕೆ ಆತನ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆಯೂ ನಡೆದಿದೆ. ಇದೇ ವೇಳೆ, ಆರೋಪಿ ಅನಿಲ್ ಲೋಬೊ ಪರವಾಗಿ ಕೆಲವು ಪ್ರಭಾವಿಗಳು ಪೊಲೀಸರಿಗೆ ಒತ್ತಡ ಹೇರುತ್ತಿದ್ದಾರೆ ಎನ್ನುವ ಮಾಹಿತಿಯೂ ಇದೆ.
Mcc Bank Anil Lobo arrest, Bail plea rejected again by Mangalore court, New year 2025 in Jail. The Mangalore court has rejected anil Lobo Bail plea in suicide case of Manohar Pereira from Fermai in Mangalore.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm