ಬ್ರೇಕಿಂಗ್ ನ್ಯೂಸ್
01-01-25 10:40 am Mangalore Correspondent ಕರಾವಳಿ
ಉಳ್ಳಾಲ, ಜ 01: ಸಮುದ್ರ ತೀರದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಸ್ನೇಹಿತರಿಬ್ಬರು ಹರಟೆ ಹೊಡೆಯುತ್ತಿದ್ದು, ಈ ವೇಳೆ ಆಯತಪ್ಪಿ ಬಾವಿಯೊಳಗಡೆ ಬಿದ್ದ ಸ್ಥಳೀಯ ಮೀನುಗಾರರೋರ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ತಿಂಗಳ ಹಿಂದಷ್ಟೆ ಈಜು ಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ್ದ ಸೋಮೇಶ್ವರ ಉಚ್ಚಿಲದ ವಾಝ್ಕೊ ರೆಸಾರ್ಟ್ ಮುಂಭಾಗದಲ್ಲಿ ಮಂಗಳವಾರ ಮುಸ್ಸಂಜೆ ಹೊತ್ತಲ್ಲಿ ನಡೆದಿದೆ. ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಸಾವನ್ನಪ್ಪಿದ ವ್ಯಕ್ತಿ.
ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಇಂದು ಸಂಜೆ ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.


ಶಶೀಂದ್ರ ಅವರಿಗೆ ಇಬ್ಬರು ಹೆಣ್ಮಕ್ಕಳಿದ್ದು ವಿವಾಹಿತರಾಗಿದ್ದಾರೆ. ಅವರ ಪತ್ನಿ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆ ಸೇರಿದ್ದು ಬುಧವಾರ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ತಯಾರಿ ನಡೆದಿತ್ತು.
ಕಳೆದ ನವೆಂಬರ್ ತಿಂಗಳಲ್ಲಿ ವಾಝ್ಕೊ ರೆಸಾರ್ಟ್ ಗೆ ವೀಕೆಂಡ್ ಕಳೆಯಲು ಬಂದಿದ್ದ ಮೈಸೂರಿನ ಮೂವರು ಯುವತಿಯರು ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದೀಗ ಅದೇ ರೆಸಾರ್ಟ್ ಮುಂಭಾಗದಲ್ಲೇ ನುರಿತ ಈಜುಗಾರರೋರ್ವರು ಸಣ್ಣ ಬಾವಿಗೆ ಬಿದ್ದು ಸಾವನ್ನಪ್ಪಿದ್ದು ಸ್ಥಳೀಯರಲ್ಲಿ ಯುವತಿಯರ ಪ್ರೇತಾತ್ಮಗಳ ಬಗ್ಗೆ ಆತಂಕ ಮನೆ ಮಾಡುವಂತಾಗಿದೆ.
Uchila man slips falls into old well accidentally, dies on spot in Mangalore. The deceased has been identified as Shashindra.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am