ಬ್ರೇಕಿಂಗ್ ನ್ಯೂಸ್
01-01-25 11:18 am Mangalore Correspondent ಕರಾವಳಿ
ಮಂಗಳೂರು, ಜ.1: ನಗರ ಹೊರವಲಯದ ಅರ್ಕುಳ ಬಳಿ ನಡೆದ ಅಪಘಾತದಲ್ಲಿ ಸಸಿಹಿತ್ಲು ಯಕ್ಷಗಾನ ಮೇಳದ ಸ್ತ್ರೀ ವೇಷಧಾರಿ ಪ್ರವೀತ್ ಆಚಾರ್ಯ (22) ಸ್ಥಳದಲ್ಲೇ ದುರಂತ ಸಾವಿಗೀಡಾಗಿದ್ದಾರೆ.
ವಿಟ್ಲ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎಸ್ ಡಬ್ಲ್ಯು ಮಾಡುತ್ತಿದ್ದ ಪ್ರವೀತ್ ಇದರ ಜೊತೆಗೆ ಸಸಿಹಿತ್ಲು ಮೇಳದಲ್ಲಿ ಯಕ್ಷಗಾನ ಕಲಾವಿದರಾಗಿದ್ದರು. ಮಂಗಳವಾರ ಬೈಕ್ ನಲ್ಲಿ ಬಿಸಿ ರೋಡಿನಿಂದ ಮಂಗಳೂರಿನತ್ತ ಬರುತ್ತಿದ್ದಾಗ ಅರ್ಕುಳ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಐಸ್ ಕ್ರೀಮ್ ಸಾಗಿಸುತ್ತಿದ್ದ ಟೆಂಪೋ ಪ್ರವೀತ್ ತಲೆಯ ಮೇಲೆ ಚಲಿಸಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಮುಂಡೂರು ನಿವಾಸಿ ಶೇಖರ ಆಚಾರ್ಯ ಮತ್ತು ಭಾರತಿ ಆಚಾರ್ಯ ಅವರ ಪುತ್ರ ಪ್ರವೀತ್ ವಿಟ್ಲಕ್ಕೆ ಎಂಎಸ್ ಡಬ್ಲ್ಯು ಕಲಿಯಲು ಬರುತ್ತಿದ್ದರು. ಯಕ್ಷಗಾನ ವೇಷಧಾರಿಯಾಗಿ ಹೋಗಬೇಕಾದ ಕಾರಣ ಮಂಗಳೂರು ಸಮೀಪದ ಸಂಬಂಧಿಕರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದರು. ಕೆಲವೊಮ್ಮೆ ಪಡೀಲ್ ಮತ್ತು ಬಿಸಿ ರೋಡ್ ನಲ್ಲಿ ವಾಹನ ನಿಲ್ಲಿಸಿ ವಿಟ್ಲ ಕಾಲೇಜಿಗೆ ಹೋಗುತ್ತಿದ್ದರು. ಮಂಗಳವಾರ ಬಿಸಿ ರೋಡ್ ನಲ್ಲಿ ಬೈಕ್ ನಿಲ್ಲಿಸಿ ವಿಟ್ಲ ಕಾಲೇಜಿಗೆ ತೆರಳಿದ್ದು ಸಂಜೆಯ ವೇಳೆಗೆ ಸ್ನೇಹಿತನೊಂದಿಗೆ ಬಸ್ಸಿನಲ್ಲಿ ಬಂದು ಅಲ್ಲಿಂದ ಬೈಕಿನಲ್ಲಿ ಮಂಗಳೂರಿಗೆ ಬರುತ್ತಿದ್ದರು.
ಮೂರು ವರ್ಷಗಳಿಂದ ಸಸಿಹಿತ್ಲು ಭಗವತಿ ಮೇಳದಲ್ಲಿ ಯಕ್ಷಗಾನ ಕಲಾವಿದನಾಗಿದ್ದು, ಮಂಗಳವಾರ ಗುರುಪುರ ಬಳಿಯ ಕಂದಾವರದಲ್ಲಿ ಯಕ್ಷಗಾನದಲ್ಲಿ ಭಾಗವಹಿಸಬೇಕಿತ್ತು. ಸ್ತ್ರೀವೇಷಧಾರಿಯಾಗಿ ದೇವಿ, ಇನ್ನಿತರ ಪ್ರಧಾನ ಪಾತ್ರಗಳನ್ನು ಮಾಡುತ್ತಿದ್ದ ಪ್ರವೀತ್ ಆಚಾರ್ಯ ಕಿರಿಯ ವಯಸ್ಸಿನಲ್ಲಿಯೇ ಭರವಸೆ ಮೂಡಿಸಿದ್ದರು. ಕಾಲೇಜು ಕಲಿಕೆಗೆ ಹಣಕಾಸು ಅಗತ್ಯವಿದ್ದುದರಿಂದ ಯಕ್ಷಗಾನ ಕಲಾವಿದನಾಗಿ ತೆರಳುತ್ತಿದ್ದರು. ಆಕಸ್ಮಿಕವಾಗಿ ನಡೆದ ಅಪಘಾತದಲ್ಲಿ ಯುವ ಕಲಾವಿದ ಜೀವ ತೆತ್ತಿದ್ದಾರೆ.
Mangalore 22 year old Yakshagana artiste dies of road accident at arkula. The deceased has been identified as Pravith Acharaya.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm