ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm