ಬ್ರೇಕಿಂಗ್ ನ್ಯೂಸ್
04-01-25 08:57 pm Mangalore Correspondent ಕರಾವಳಿ
ಮಂಗಳೂರು, ಜ.4: ಪುತ್ತೂರಿನ ಕಬಕದಲ್ಲಿರುವ ಮಹಮ್ಮದಿಯಾ ಟ್ರಾವೆಲ್ ಏಜೆನ್ಸಿ ಹೆಸರಲ್ಲಿ ಆಶ್ರಫ್ ಸಖಾಫಿ ಪರ್ಪುಂಜೆ ಎಂಬವರು ಉಮಾ ಯಾತ್ರೆಗಾಗಿ ಸುಮಾರು 172 ಜನರನ್ನು ಪವಿತ್ರ ಮೆಕ್ಕಾಕ್ಕೆ ಕರೆದೊಯ್ದು ಮದೀನಾದಲ್ಲಿ ಬಿಟ್ಟು ಬಂದು ವಂಚನೆ ಮಾಡಿದ್ದಾರೆ. ಮದೀನಾದಲ್ಲಿ ಸಿಕ್ಕಿಬಿದ್ದು ಅನ್ನಾಹಾರವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದು ನನ್ನ ಗಮನಕ್ಕೆ ಬರುತ್ತಲೇ ಸೌದಿಯಲ್ಲಿರುವ ಸ್ನೇಹಿತರನ್ನು ಸಂಪರ್ಕಿಸಿ ಯಾತ್ರಾರ್ಥಿಗಳನ್ನು ತಾಯ್ನಾಡಿಗೆ ತಲುಪಿಸುವ ವ್ಯವಸ್ಥೆ ಮಾಡಿರುತ್ತೇನೆ. ಈ ಸಂಸ್ಥೆಯ ಲೈಸನ್ಸ್ ಕೂಡಲೇ ರದ್ದುಪಡಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಶಾಸಕ ಮೊಯಿದೀನ್ ಬಾವಾ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿಕ್ಕಿಬಿದ್ದ ಯಾತ್ರಾರ್ಥಿಗಳಲ್ಲಿ ಕೆಲವರು ತಮ್ಮ ಸ್ವಂತ ಖರ್ಚಿನಲ್ಲಿ ರಿಟರ್ನ್ ಟಿಕೆಟ್ ಪಡೆದು ಬಂದಿದ್ದರೆ ಇನ್ನುಳಿದ 58 ಮಂದಿಗೆ ನನ್ನ ಸ್ನೇಹಿತರ ಮುಖಾಂತರ ಟಿಕೆಟ್ ತೆಗೆಸಿ ಊರಿಗೆ ಮರಳಿಸುವ ವ್ಯವಸ್ಥೆಯನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.

ರಿಟರ್ನ್ ಟಿಕೇಟ್ ಪಡೆಯದೇ ಡಮ್ಮಿ ಟಿಕೇಟ್ ತೋರಿಸಿ ವಂಚಿಸುವ ಇಂತಹ ಟ್ರಾವೆಲ್ ಏಜೆನ್ಸಿಯ ವಿರುದ್ದ ಹಾಗೂ ಇದಕ್ಕೆ ಅನುವು ಮಾಡಿಕೊಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಸಾರ್ವಜನಿಕರನ್ನು ವಂಚಿಸುವ ಇಂತಹ ಟ್ರಾವೆಲ್ ಏಜೆನ್ಸಿಗಳ ಲೈಸನ್ಸ್ ರದ್ದು ಪಡಿಸಬೇಕೆಂದು ಮೊಯ್ದೀನ್ ಬಾವಾ ಒತ್ತಾಯಿಸಿದ್ದಾರೆ.
ಅಲ್ಲಿ ಸಿಕ್ಕಿಬಿದ್ದ ಉಮ್ರಾ ಯಾತ್ರಾರ್ಥಿಗಳ ಪರಿಸ್ಥಿತಿ ತೀರಾ ಕೆಟ್ಟದ್ದಾಗಿತ್ತು. ಶುಗರ್ ಇನ್ನಿತರ ಕಾಯಿಲೆಯಿಂದ ಬಳಲುತ್ತಿದ್ದವರಿಗೆ ಸೂಕ್ತ ಚಿಕಿತ್ಸೆ ಯಾವುದೂ ಸಿಕ್ಕಿರಲಿಲ್ಲ. ನಾಮ್ ಕೆ ವಾಸ್ತೆ ಫಲಕ ಹಾಕಿಕೊಂಡು ಕಡಿಮೆ ಖರ್ಚಿಗೆ ಉಮ್ರಾ ಕರೆದುಕೊಂಡು ಹೋಗುತ್ತೇವೆ ಎಂದು ಜನರನ್ನು ಮಂಗ ಮಾಡುತ್ತಾರೆ. ಬುದ್ಧಿವಂತ ಜಿಲ್ಲೆಯ ಜನರು ಇದನ್ನು ನಂಬಬಾರದು. ರಿಟರ್ನ್ ಟಿಕೆಟ್ ಖಚಿತ ಪಡಿಸಿಕೊಂಡೇ ಹೋಗಬೇಕು ಎಂದು ಹೇಳಿದರು.
ಯಾವುದೇ ರೀತಿಯಲ್ಲಿ ಜನ ಮೋಸ ಹೋಗಬಾರದು. ದೇಶದಲ್ಲೇ ಈ ರೀತಿಯಾದರೆ ಪರವಾಗಿಲ್ಲ. ವಿದೇಶಕ್ಕೆ ಕರೆದುಕೊಂಡು ಹೋಗಿ ಮೋಸ ಮಾಡಿದರೆ ಇದಕ್ಕೆ ಹೊಣೆ ಯಾರು? ಇದರ ವಿರುದ್ಧ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಕರೆದುಕೊಂಡು ಹೋದ ಜನ ಊರಲ್ಲಿ ಬಂದು ಎಲ್ಲವನ್ನು ತಾನೇ ನಿಭಾಯಿಸಿದ್ದಾಗಿ ಹೇಳುತ್ತಾರೆ. ಇದು ಖಂಡನೀಯ“ ಎಂದು ಬಾವಾ ಕಿಡಿಕಾರಿದ್ದಾರೆ.
Puttur kabaka Travel Agency MUHAMMADIYA cheats 172 Muslim pilgrims slams Mohiuddin Bava by issuing no return ticket to the Haj pilgrims. Demands action against the travel agency.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am