ಬ್ರೇಕಿಂಗ್ ನ್ಯೂಸ್
05-01-25 02:13 pm Mangalore Correspondent ಕರಾವಳಿ
ಮಂಗಳೂರು, ಜ.5 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದರ ಜೊತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್ ಅನ್ನು ಸ್ಥಾಪಿಸುವುದರಿಂದ ಯುವಜನತೆಯನ್ನು ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ವಿಶ್ವದರ್ಜೆ ಶಿಕ್ಷಣ ಸಂಸ್ಥೆಗಳು ಇರುವ ಹಿನ್ನಲೆಯಲ್ಲಿ ಸೈನಿಕ ಶಾಲೆ ಸ್ಥಾಪಿಸುವುದು ಶೈಕ್ಷಣಿಕವಾಗಿಯೂ ಹೆಚ್ಚಿನ ಅನುಕೂಲ ಒದಗಿಸಲಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.





ದೇಶದ ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಕ್ಯಾಪ್ಟನ್ ಪ್ರಾಂಜಲ್ ಹಾಗೂ ಕಮಾಂಡರ್ ಜಾರ್ಜ್ ಮಾರ್ಟಿಸ್ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಇಲಾಖೆಯಿಂದ ಆಗಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ
ತಮ್ಮ ಭೇಟಿ ವೇಳೆ ಕ್ಯಾ. ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯರೂಪಕ್ಕೆ ತರಬಹುದಾದ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರಾಜನಾಥ್ ಸಿಂಗ್ ಅವರಿಂದ ಮಾರ್ಗದರ್ಶನವನ್ನು ಪಡೆದುಕೊಂಡರು. ಇದೇ ವೇಳೆ ಕ್ಯಾ. ಚೌಟ ಅವರು ಸಚಿವ ರಾಜನಾಥ್ ಸಿಂಗ್ ಅವರಿಗೆ ಕರಾವಳಿಯ ಸಂಸ್ಕೃತಿ ಸಂಕೇತವಾದ ಕಂಬಳದ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.
Dakshina Kannada MP Capt Brijesh Chowta met with Defence Minister Rajnath Singh to propose significant defence infrastructure initiatives for the district, including the establishment of a Sainik School and a military base in Mangaluru.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am