ಬ್ರೇಕಿಂಗ್ ನ್ಯೂಸ್
05-01-25 10:16 pm Mangalore Correspondent ಕರಾವಳಿ
ಮಂಗಳೂರು, ಜ 05: ನಾಡಿನ ಹಿರಿಯ ಸಾಹಿತಿ ಡಾ. ನಾ. ಡಿಸೋಜಾ (87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಫಾದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರ ಸಂಜೆ ಅವರ ಹುಟ್ಟೂರಾದ ಸಾಗರದಲ್ಲಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.
ನಾ.ಡಿಸೋಜ ಅವರ ಪುತ್ರ ನವೀನ್ ಡಿಸೋಜ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ.
' ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ಡಾ. ನಾ ಡಿಸೋಜ ಅವರು ಇಂದು ರಾತ್ರಿ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಪಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು' ಎಂದಿದ್ದಾರೆ.
ಡಾ. ನಾ ಡಿಸೋಜಾ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮಡಿಕೇರಿಯಲ್ಲಿ ನಡೆದ 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಬಂಜೆ ಬೆಂಕಿ, ಮುಳುಗಡೆ, ಕಾಡಿನ ಬೆಂಕಿ, ದ್ವೀಪ, ಬಳುವಳಿ, ಬೆಟ್ಟದ ಪುರದ ದಿಟ್ಟ ಮಕ್ಕಳು ಸೇರಿದಂತೆ ಸಾಕಷ್ಟು ಕೃತಿಗಳನ್ನು ಬರೆದಿದ್ದಾರೆ. ಅಜ್ಞಾತ, ಒಂದು ಜಲಪಾತದ ಸುತ್ತ , ಕೈತಾನ್ ಗಾಂಧಿಯ ಸ್ವಾತಂತ್ರ್ಯ ಹೋರಾಟ, ಜೀವಕಳೆ, ಪ್ರೀತಿಯೊಂದೆ ಸಾಲದೇ?, ಬಂಜೆ ಬೆಂಕಿ, ಪ್ರಜ್ಞಾಬಲಿ, ನೆಲೆ, ನಡುವೆ ನಿಂತ ಜನ, ಗಾಂಧಿ ಬಂದರು, ಒಡ್ಡು, ಮಾನವ, ಮುಳುಗಡೆ, ವಿಷಾನಿಲ ಇನ್ನೂ ಅನೇಕ ಕಾದಂಬರಿಗಳನ್ನೊಳಗೊಂಡತೆ ಮಕ್ಳ ಸಾಹಿತ್ಯವನ್ನೂ, ರೇಡಿಯೋ ನಾಟಕಗಳನ್ನೂ ನಾ.ಡಿಸೋಜ ಅವರು ರಚಿಸಿದ್ದಾರೆ.
ಡಾ ನಾ ಡಿಸೋಜಾ ಅವರು ವೃತ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆ ಜೊತೆಗೆ ಕನ್ನಡ ಸಾಹಿತ್ಯ ಎಲ್ಲಾ ಪ್ರಕಾರಗಳಲ್ಲೂ ಕೃತಿ ಬರೆಯುತ್ತಾ ಗುರುತಿಸಿಕೊಂಡಿದ್ದಾರೆ
Renowned Kannada writer and intellectual, Norbert D'Souza, popularly known as Dr Na D'Souza, passed away at the age of 87, a private hospital in Mangaluru after a prolonged illness. A celebrated figure in Kannada literature and cinema, Dr D'Souza's demise marks the end of an era, leaving behind a legacy that continues to inspire generations.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm