ಬ್ರೇಕಿಂಗ್ ನ್ಯೂಸ್
05-01-25 10:51 pm Mangalore Correspondent ಕರಾವಳಿ
ಉಳ್ಳಾಲ, ಜ.5: ಉಳ್ಳಾಲ ತಾಲೂಕಿನ ಪ್ರತಿಷ್ಟಿತ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ನಿರ್ದೇಶಕರ ಚುನಾವಣೆ ಭಾನುವಾರ ನಡೆದಿದ್ದು, ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ಅವರ ನೇತೃತ್ವದ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ ಅಭ್ಯರ್ಥಿಗಳು 12 ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ. 12 ಕ್ಷೇತ್ರದಲ್ಲೂ ಸ್ಫರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಖಾತೆ ತೆರೆಯುವಲ್ಲಿ ಮುಗ್ಗರಿಸಿದ್ದಾರೆ.
ಭಾನುವಾರ ಕೋಟೆಕಾರಿನ ಸ್ಟೆಲ್ಲಾ ಮೆರೀಸ್ ಶಾಲೆಯಲ್ಲಿ ಬೆಳಗ್ಗೆ 9 ರಿಂದ 4 ಗಂಟೆಯ ವರೆಗೆ ಸಂಘದ ಸದಸ್ಯರಿಂದ ಮತದಾನ ಪ್ರಕ್ರಿಯೆ ನಡೆದಿದ್ದು, ಸಂಜೆ ವೇಳೆ ಮತ ಎಣಿಕೆ ನಡೆದಿದೆ. ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮಂಗಳೂರು ಇಲ್ಲಿನ ಅಧೀಕ್ಷಕರಾದ ಬಿ.ನಾಗೇಂದ್ರ ಅವರು ಫಲಿತಾಂಶವನ್ನು ಘೋಷಿಸಿದರು. ಫಲಿತಾಂಶದಲ್ಲಿ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ 12 ಅಭ್ಯರ್ಥಿಗಳೂ ಜಯ ಗಳಿಸಿದ್ದಾರೆ.




ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಅಬ್ಬುಸಾಲಿ ಕೆ.ಬಿ, ಕೃಷ್ಣಪ್ಪ ಸಾಲ್ಯಾನ್, ಗಂಗಾಧರ ಯು, ರಾಘವ ಉಚ್ಚಿಲ್, ರಾಘವ ಆರ್.ಉಚ್ಚಿಲ್, ಸಾಲಗಾರ ಅನುಸೂಚಿತ ಜಾತಿ ಕ್ಷೇತ್ರದಲ್ಲಿ ಕೃಷ್ಣಪ್ಪ, ಸಾಲಗಾರ ಅನುಸೂಚಿತ ಪಂಗಡ ಕ್ಷೇತ್ರದಲ್ಲಿ ಬಾಬು ನಾಯಕ್ , ಸಾಲಗಾರ ಹಿಂದುಳಿದ ವರ್ಗ "ಎ" ಕ್ಷೇತ್ರದಲ್ಲಿ ಅರುಣ್ ಕುಮಾರ್ ಯು, ಸಾಲಗಾರ ಹಿಂದುಳಿದ ವರ್ಗ "ಬಿ" ಕ್ಷೇತ್ರದಲ್ಲಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು, ಸಾಲಗಾರ ಮಹಿಳಾ ಮೀಸಲು ಸ್ಥಾನ ಕ್ಷೇತ್ರದಲ್ಲಿ ಸುನಿತಾ ಲೋಬೊ, ಸುರೇಖಾ ಚಂದ್ರಹಾಸ್ ಜಯ ಗಳಿಸಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಲ್ಲಿ ಉದಯ ಕುಮಾರ್ ಶೆಟ್ಟಿ ಕೊಂಡಾಣಗುತ್ತು ಜಯ ಗಳಿಸಿದ್ದಾರೆ.
ಮತದಾನ ಕೇಂದ್ರದ ಬಳಿಯಲ್ಲೇ ಕೆಲವರಿಗೆ ಸಂಘದ ಸದಸ್ಯತನದ ನಕಲಿ ಗುರುತಿನ ಕಾರ್ಡ್ ಗಳನ್ನ ನೀಡಿ ಮತದಾನ ನಡೆಸುತ್ತಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.
Mangalore Kotekar Samaja Seva Sahakari Sangha bank election, major victory. BJP members thronged to open bank accounts soon after their leaders were announced as winners.
27-03-26 04:04 pm
HK News Staffer
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm