ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.


ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm