ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.
ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am