ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.
ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm