ಬ್ರೇಕಿಂಗ್ ನ್ಯೂಸ್
11-01-25 04:57 pm Mangaluru Correspondent ಕರಾವಳಿ
ಮಂಗಳೂರು, ಜ.11: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಸಿದ್ಧತೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳ್ಳಾಲ ಕ್ಷೇತ್ರದ ನರಿಂಗಾನದಲ್ಲಿ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆಯುವ ಕಂಬಳಕ್ಕೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಿಂದ ನಗರದ ಕದ್ರಿ- ನಂತೂರು ರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರು. ಇದನ್ನರಿತ ಪೊಲೀಸರು ಮುಖ್ಯಮಂತ್ರಿ ಬರುವ ಮೊದಲೇ ಬಿಕೆ ಇಮ್ತಿಯಾಜ್ ನೇತೃತ್ವದಲ್ಲಿ ಸೇರಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಕಮ್ಯುನಿಸ್ಟ್ ಮತ್ತು ಡಿವೈಎಫ್ಐ ವತಿಯಿಂದ ಜನಪರ ವಿಚಾರಗಳಲ್ಲಿ ಪ್ರತಿಭಟನೆ ನಡೆಸಿದ್ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ್ದಾಗಲೂ ಮುನೀರ್ ಕಾಟಿಪಳ್ಳ ಸೇರಿದಂತೆ ಕೆಲವರ ವಿರುದ್ಧ ಕೇಸು ದಾಖಲಿಸಲಾಗಿತ್ತು. ಇದನ್ನ ವಿರೋಧಿಸಿ ಕಮ್ಯುನಿಸ್ಟ್ ಮತ್ತು ಇತರ ಸಂಘಟನೆಗಳು ಪೊಲೀಸ್ ಕಮಿಷನರ್ ವಿರುದ್ಧ ಸರಣಿ ಪ್ರತಿಭಟನೆ ನಡೆಸಿದ್ದವು.
ಆದರೆ ಜಿಲ್ಲೆಯವರೇ ಆದ ಸ್ಪೀಕರ್ ಯುಟಿ ಖಾದರ್, ಕಮ್ಯುನಿಸ್ಟರ ಪ್ರತಿಭಟನೆಗೆ ಸೊಪ್ಪು ಹಾಕಿರಲಿಲ್ಲ. ಕಮಿಷನರ್ ಅವರನ್ನು ಸಮರ್ಥನೆಯನ್ನೇ ಮಾಡಿದ್ದರು. ಇದೀಗ ಖಾದರ್ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬರುವಾಗಲೇ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದು, ಮುಖ್ಯಮಂತ್ರಿ ಗಮನ ಸೆಳೆಯುವ ಯತ್ನ ಮಾಡಿದ್ದಾರೆ. ಅದಕ್ಕೂ ಮೊದಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
DYFI activists gherao CM Siddaramaiahs car in Mangalore, demanding suspension of Police Commissioner IPS Anupam Agrawal.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 12:35 pm
Mangalore Correspondent
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm