ಬ್ರೇಕಿಂಗ್ ನ್ಯೂಸ್
12-01-25 10:06 pm Mangalore Correspondent ಕರಾವಳಿ
ಪುತ್ತೂರು, ಜ.12: ಪುತ್ತೂರು ಪಿಎಲ್ ಡಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕೃತಗೊಳಿಸಿದ್ದಕ್ಕೆ ಸಿಟ್ಟಿಗೆದ್ದ ಶಾಸಕ ಅಶೋಕ್ ರೈ ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ಖಡಕ್ ಭಾಷೆಯಲ್ಲಿ ತರಾಟೆಗೆ ಎತ್ತಿಕೊಂಡಿದ್ದಾರೆ.
ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ತು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ಎಆರ್ ಒ ರಘು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಮತ್ತು ಉದ್ದೇಶಪೂರ್ವಕವಾಗಿ ನಮ್ಮ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ ಎಂದು ಇಬ್ಬರು ಅಭ್ಯರ್ಥಿಗಳು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆ.ಪಿ ಆಳ್ವರ ಗಮನಕ್ಕೆ ತಂದಿದ್ದಾರೆ. ಕೆ.ಪಿ ಆಳ್ವ ಅವರು ಶಾಸಕರಿಗೆ ಹೇಳಿ ಜೊತೆಯಾಗಿಯೇ ಬ್ಯಾಂಕಿಗೆ ತೆರಳಿದ್ದಾರೆ. ಶಾಸಕರು ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡಿದ್ದು ನಾಮಪತ್ರ ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು. ಯಾವುದೇ ಕಾರಣವಿಲ್ಲದೆ ದುರುದ್ದೇಶದಿಂದ ಅಧಿಕಾರಿ ತಿರಸ್ಕಾರ ಮಾಡಿದ್ದಾರೆ ಎಂದು ನೇರ ಆರೋಪ ಮಾಡಿದರು.
ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಯಾವ ಕೆಟಗರಿಯಲ್ಲಿ ಸ್ಪರ್ಧೆ ಮಾಡುತ್ತಿದ್ದಾನೆ ಎಂಬ ವಿಚಾರವನ್ನು ನಾಮಪತ್ರದಲ್ಲಿ ನಮೂದಿಸಬೇಕು, ನಮೂದಿಸಿದ ಬಳಿಕ ಉಳಿದ ಕೆಟಗರಿ ಹೆಸರನ್ನು ಅಳಿಸಬೇಕು, ಅಳಿಸದ ಕಾರಣ ನಾಮಪತ್ರ ತಿರಸ್ಕಾರ ಮಾಡಿದ್ದೇನೆ ಎಂದು ಶಾಸಕರಲ್ಲಿ ಚುನಾವಣಾಧಿಕಾರಿ ತಿಳಿಸಿದ್ದಾರೆ. ಆದರೆ ಕಾನೂನು ಪ್ರಕಾರ ಅಭ್ಯರ್ಥಿ ತಾನು ಸ್ಪರ್ಧಿಸುವ ವಿಭಾಗಕ್ಕೆ ರೈಟ್ ಗುರುತು ಹಾಕಬೇಕು ಎಂದು ಇದ್ದು ಉಳಿದ ಕೆಟಗರಿಯನ್ನು ಅಳಿಸಬೇಕೆಂಬ ನಿಯಮವಿರುವುದಿಲ್ಲ. ಆದರೆ ಅಧಿಕಾರಿ ಈ ವಿಚಾರದಲ್ಲಿ ತಪ್ಪು ಮಾಡಿದ್ದಾರೆ ಎಂದು ಶಾಸಕರು ಹೇಳಿದರು.
ಇದಲ್ಲದೆ, ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ನೇರವಾಗಿಯೇ ಪ್ರಶ್ನಿಸಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು ಮೋಸ ಮಾಡಲು ಬಿಡುವುದಿಲ್ಲ. ಉದ್ದೇಶಪೂರ್ವಕ ಈ ಕೃತ್ಯ ಮಾಡಿದ್ದೀರಿ ಎಂದು ಅಶೋಕ್ ರೈ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡರು.
ನಿಮ್ಮ ಮೇಲೆ ಮೊದಲೇ ನನಗೆ ದೂರು ಬಂದಿತ್ತು, ಸುಧಾರಿಸಬಹುದು ಎಂದು ಸುಮ್ಮನಿದ್ದೆ. ಈಗ ಬಣ್ಣ ಬಯಲಾಯಿತು. ಲಂಚ ತಗೊಂಡು, ಅನ್ಯಾಯ ಮಾಡಿದ ನಿಮ್ಮನ್ನು ಸಸ್ಪೆಂಡ್ ಮಾಡಿಸ್ತೇನೆ. ನಿಮಗೆ ಬೇಕಾದಂತೆ ಕಾನೂನು ಬದಲಾಯಿಸುವ ಅಧಿಕಾರ ನಿಮಗಿಲ್ಲ ಎಂದು ಅಧಿಕಾರಿಗೆ ಶಾಸಕರು ಎಚ್ಚರಿಸಿದರು.
PLD bank election, nomination of congress leader rejected, MLA Ashok Rai slams officer in Puttur.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am