ಬ್ರೇಕಿಂಗ್ ನ್ಯೂಸ್
13-01-25 09:08 pm Mangalore Correspondent ಕರಾವಳಿ
ಮಂಗಳೂರು, ಜ.13: ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಇಡೀ ರಾಜ್ಯದಲ್ಲಿ ಮಾರ್ದನಿಸಿದೆ. ಬಿಜೆಪಿ ನಾಯಕರು, ಹಿಂದು ಸಮಾಜದ ಸಂತರು ರಾಜ್ಯದೆಲ್ಲೆಡೆ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಆಗಿರುವ ಎನ್. ರವಿಕುಮಾರ್, ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ಆಕಸ್ಮಿಕ ಆಗಿರುವುದಲ್ಲ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹಿಂದು ಭಾವನೆ ಕೆಣಕುವ ಯತ್ನ ನಡೆದಿದೆ. ಪ್ರಕರಣದಲ್ಲಿ ಯಾರೋ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನೇ ಈ ಕೃತ್ಯ ಮಾಡಿದ್ದಾನೆ ಎಂಬುದಕ್ಕೆ ಯಾವ ದಾಖಲೆ ಇದೆ. ಅಲ್ಲದೆ, ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆಂದು ಹೇಳುತ್ತಿದ್ದಾರೆ. ಯಾವ ಕುಡಿದ ಮತ್ತಿನಲ್ಲೂ ಇಂಥ ಘೋರ ಕೃತ್ಯ ಎಸಗಲ್ಲ. ಇದು ಮನುಷ್ಯ ತಲೆತಗ್ಗಿಸುವ ಕೃತ್ಯ. ಈ ಕೃತ್ಯಕ್ಕೆ ಸಿಎಂ ಸಿದ್ದರಾಮಯ್ಯ ನಿರ್ಲಜ್ಜ ಆಡಳಿತವೇ ಕಾರಣ ಎಂದರು.
ಬಿಜೆಪಿ ಸರಕಾರ ಇದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ತರಲಾಗಿತ್ತು. ಆದರೆ ಕಾಂಗ್ರೆಸ್ ಈ ಕಾನೂನು ಜಾರಿಯಲ್ಲಿದ್ದರೂ, ಅನುಷ್ಠಾನ ಮಾಡುತ್ತಿಲ್ಲ. ಇದರಿಂದಾಗಿ ಎಲ್ಲೆಂದರಲ್ಲಿ ಗೋವಿನ ಹತ್ಯೆ ಆಗುತ್ತಿದೆ, ಈಗ ಯಾವುದೋ ದ್ವೇಷದಲ್ಲಿ ಕೆಚ್ಚಲು ಕೊಯ್ದು ಮೃಗೀಯ ವರ್ತನೆ ತೋರಿದ್ದಾರೆ. ಸಿದ್ದರಾಮಯ್ಯ ಒಂದು ವರ್ಗದ ಬಗ್ಗೆ ತೀವ್ರ ಮಮಕಾರ ತೋರಿದ್ದರ ಪ್ರತಿಫಲ ಕಾಣುತ್ತಿದ್ದೇವೆ. ಈ ಕೃತ್ಯಕ್ಕೆ ಯಾರೆಲ್ಲ ಹೊಣೆಯಾಗಿದ್ದಾರೋ ಅವರೆಲ್ಲರನ್ನೂ ಬಂಧಿಸಬೇಕು. ಬಹುಮತದ ಆಡಳಿತ ಇದೆಯೆಂದು ಏನು ಮಾಡಿದರೂ ಆಗುತ್ತದೆ ಎಂದುಕೊಂಡಿದ್ದಾರೆ. ಕಾಂಗ್ರೆಸಿಗರು ಅಹಂಕಾರದ ಪರಮಾವಧಿ ತೋರಿಸುತ್ತಿದ್ದಾರೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಎಂಎಲ್ಸಿ ಕಿಶೋರ್ ಕುಮಾರ್, ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ನಂದನ್ ಮಲ್ಯ ಮತ್ತಿತರರು ಇದ್ದರು.
The BJP staged a protest against the chopping of udders of cows at Chamarajpet in central Bengaluru, in front of the Mini Vidhana Soudha in Mangaluru on Monday.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm