ಬ್ರೇಕಿಂಗ್ ನ್ಯೂಸ್
13-01-25 09:08 pm Mangalore Correspondent ಕರಾವಳಿ
ಮಂಗಳೂರು, ಜ.13: ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಇಡೀ ರಾಜ್ಯದಲ್ಲಿ ಮಾರ್ದನಿಸಿದೆ. ಬಿಜೆಪಿ ನಾಯಕರು, ಹಿಂದು ಸಮಾಜದ ಸಂತರು ರಾಜ್ಯದೆಲ್ಲೆಡೆ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಆಗಿರುವ ಎನ್. ರವಿಕುಮಾರ್, ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ಆಕಸ್ಮಿಕ ಆಗಿರುವುದಲ್ಲ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹಿಂದು ಭಾವನೆ ಕೆಣಕುವ ಯತ್ನ ನಡೆದಿದೆ. ಪ್ರಕರಣದಲ್ಲಿ ಯಾರೋ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನೇ ಈ ಕೃತ್ಯ ಮಾಡಿದ್ದಾನೆ ಎಂಬುದಕ್ಕೆ ಯಾವ ದಾಖಲೆ ಇದೆ. ಅಲ್ಲದೆ, ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆಂದು ಹೇಳುತ್ತಿದ್ದಾರೆ. ಯಾವ ಕುಡಿದ ಮತ್ತಿನಲ್ಲೂ ಇಂಥ ಘೋರ ಕೃತ್ಯ ಎಸಗಲ್ಲ. ಇದು ಮನುಷ್ಯ ತಲೆತಗ್ಗಿಸುವ ಕೃತ್ಯ. ಈ ಕೃತ್ಯಕ್ಕೆ ಸಿಎಂ ಸಿದ್ದರಾಮಯ್ಯ ನಿರ್ಲಜ್ಜ ಆಡಳಿತವೇ ಕಾರಣ ಎಂದರು.
ಬಿಜೆಪಿ ಸರಕಾರ ಇದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ತರಲಾಗಿತ್ತು. ಆದರೆ ಕಾಂಗ್ರೆಸ್ ಈ ಕಾನೂನು ಜಾರಿಯಲ್ಲಿದ್ದರೂ, ಅನುಷ್ಠಾನ ಮಾಡುತ್ತಿಲ್ಲ. ಇದರಿಂದಾಗಿ ಎಲ್ಲೆಂದರಲ್ಲಿ ಗೋವಿನ ಹತ್ಯೆ ಆಗುತ್ತಿದೆ, ಈಗ ಯಾವುದೋ ದ್ವೇಷದಲ್ಲಿ ಕೆಚ್ಚಲು ಕೊಯ್ದು ಮೃಗೀಯ ವರ್ತನೆ ತೋರಿದ್ದಾರೆ. ಸಿದ್ದರಾಮಯ್ಯ ಒಂದು ವರ್ಗದ ಬಗ್ಗೆ ತೀವ್ರ ಮಮಕಾರ ತೋರಿದ್ದರ ಪ್ರತಿಫಲ ಕಾಣುತ್ತಿದ್ದೇವೆ. ಈ ಕೃತ್ಯಕ್ಕೆ ಯಾರೆಲ್ಲ ಹೊಣೆಯಾಗಿದ್ದಾರೋ ಅವರೆಲ್ಲರನ್ನೂ ಬಂಧಿಸಬೇಕು. ಬಹುಮತದ ಆಡಳಿತ ಇದೆಯೆಂದು ಏನು ಮಾಡಿದರೂ ಆಗುತ್ತದೆ ಎಂದುಕೊಂಡಿದ್ದಾರೆ. ಕಾಂಗ್ರೆಸಿಗರು ಅಹಂಕಾರದ ಪರಮಾವಧಿ ತೋರಿಸುತ್ತಿದ್ದಾರೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಎಂಎಲ್ಸಿ ಕಿಶೋರ್ ಕುಮಾರ್, ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ನಂದನ್ ಮಲ್ಯ ಮತ್ತಿತರರು ಇದ್ದರು.
The BJP staged a protest against the chopping of udders of cows at Chamarajpet in central Bengaluru, in front of the Mini Vidhana Soudha in Mangaluru on Monday.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm