ಬ್ರೇಕಿಂಗ್ ನ್ಯೂಸ್
14-01-25 02:27 pm Mangalore Correspondent ಕರಾವಳಿ
ಮಂಗಳೂರು, ಜ.14 : ಸವಣೂರು, ಸುಬ್ರಹ್ಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ ಗೆ ಸೂಚನೆ ನೀಡಿದ್ದಾರೆ.
ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕುಸುಮ್ ಯೋಜನೆಯಡಿ ದೇಶದೆಲ್ಲೆಡೆ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸಿ ಗ್ರೀನ್ ಎನರ್ಜಿಗೆ ಒತ್ತು ನೀಡುವಂತೆ ಕರೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ಸವಣೂರು, ಸುಬ್ರಹ್ಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಜಾಗ ಗುರುತಿಸುವಂತೆ ಸಚಿವಾಲಯದಿಂದ ಮೆಸ್ಕಾಂಗೆ ಪತ್ರ ಬಂದಿದೆ. ಹೀಗಾಗಿ, ಒಂದು ವಾರದೊಳಗೆ ಕಡಬ ತಾಲೂಕು ವ್ಯಾಪ್ತಿಯಲ್ಲಿ ಪಿಎಂ ಕುಸುಮ್ ಸೋಲಾರ್ ಪಾರ್ಕ್ ಸ್ಥಾಪನೆಗೆ ಸೂಕ್ತ ಸ್ಥಳಾವಕಾಶದ ಬಗ್ಗೆ ಪರಿಶೀಲಿಸಿ ಅದರ ಸಾಧಕ- ಬಾಧಕಗಳ ಬಗ್ಗೆ ವರದಿ ನೀಡುವಂತೆ ಸಂಸದರು ತಹಶೀಲ್ದಾರರಿಗೆ ಸೂಚಿಸಿದ್ದಾರೆ.




ಕೋಡಿಂಬಾಳ ರೈಲು ಅಭಿವೃದ್ಧಿಯ ಭರವಸೆ
ಸಂಸದರು ತಾಲೂಕಿನ ಜನತೆಯ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದ ವೇಳೆ, ಕಡಬಕ ತಾಲೂಕಿನ ಕೋಡಿಂಬಾಳದ ರೈಲು ನಿಲ್ದಾಣವನ್ನು ಅಭಿವೃದ್ಧಿ ಪಡಿಸಿದರೆ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯರು ಮನವಿ ನೀಡಿದ್ದಾರೆ. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಂಸದರು, ಸಂಬಂಧಪಟ್ಟವರ ಜತೆಗೆ ಚರ್ಚಿಸಿ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಶ್ರಮಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.
ಸಂಸದರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಮಿನಿ ವಿಧಾನ ಸೌಧದಲ್ಲಿ ಜನಜಂಗುಲಿ ನೆರೆದಿತ್ತು. ಸಣ್ಣಪುಟ್ಟ ಕೆಲಸ ಕಾರ್ಯಗಳಿಗೆ ಜನರನ್ನು ಅಲೆದಾಡಿಸದಂತೆ ಇದೇ ಸಂಧರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಬಿ.ಜೆ.ಪಿ ಪ್ರಮುಖರಾದ ಪುಲಸ್ತ್ಯ ರೈ, ಪ್ರಕಾಶ್ ಎನ್.ಕೆ, ಮಧುಸೂದನ್ ಕೊಂಬಾರು, ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಸುರೇಶ್ ದೆಂತಾರು, ರಮೇಶ ಕಲ್ಪುರೆ, ಅಶೋಕ್ ನೆಕ್ಕರೆ, ವಾಡ್ಯಪ್ಪ ಗೌಡ, ಸದಾಶಿವ ಶೆಟ್ಟಿ ಮಾರಂಗ, ಲಕ್ಷೀಶ ಪೆಲತ್ತಾರು ಸೇರಿದಂತೆ ಹಲವು ಮಂದಿ ಬಿ.ಜೆ.ಪಿ ಪ್ರಮುಖರು, ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Mangalore Dakshina Kannada MP Capt Brijesh Chowta directed Kadaba tahsildar to identify land for solar park in Kadaba taluk within a week.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
27-03-26 12:11 pm
HK News Staffer
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm