ಬ್ರೇಕಿಂಗ್ ನ್ಯೂಸ್
15-01-25 12:09 pm Mangaluru Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ತಪಾಸಣೆಗೆ ಮುಂದಾದ ಸಿಬ್ಬಂದಿಗಳಿಗೆ ವಿಚಾರಣಾಧೀನ ಕೈದಿಗಳು ಕೈಯಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಜೈಲು ಸಿಬಂದಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಸೆಲ್ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ, ಎ ಬ್ಲಾಕ್ ನಲ್ಲಿರುವ ವಿಚಾರಣಾಧೀನ ಕೈದಿಗಳು ಸಿಬಂದಿಗೆ ಒಳಗೆ ಬರದಂತೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಎ ಮತ್ತು ಬಿ ಬ್ಲಾಕ್ ಎಂದು ಹಿಂದು- ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಇದೆ. ಎ ಬ್ಲಾಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ತುಂಬಲಾಗಿದೆ. ಅದರೊಳಗೆ ತಪಾಸಣೆಗೆ ತೆರಳಿದ್ದಾಗ ಹಲ್ಲೆ ಯತ್ನ ಆಗಿದೆ. ಆನಂತರ, ಸಿಬಂದಿ ಸೆಲ್ ಒಳಗಡೆ ಹೋಗದೆ ಹಿಂದಕ್ಕೆ ಬಂದಿದ್ದಾರೆ. ರಾತ್ರಿ 7.30ಕ್ಕೆ ಎಂದಿನಂತೆ ಊಟ ಪೂರೈಕೆ ಮಾಡಿದ ಬಳಿಕ ಸೆಲ್ ಒಳಗೆ ತಪಾಸಣೆ ನಡೆಸಲು ಸಿಬಂದಿ ಮುಂದಾಗಿದ್ದರು.
ಜೈಲು ಸೆಲ್ ನಲ್ಲಿ ಮೊಬೈಲ್, ಗಾಂಜಾ ಇನ್ನಿತರ ನಿಷೇಧಿತ ಮಾದಕ ದ್ರವ್ಯಗಳಿರುವ ಶಂಕೆಯಲ್ಲಿ ಜೈಲು ಅಧೀಕ್ಷಕ ಎಂ.ಎಚ್. ಅಶೇಖಾನ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಆದರೆ ಎ ಬ್ಲಾಕ್ ಕೈದಿಗಳು ತಮ್ಮಲ್ಲಿದ್ದ ಪಾತ್ರೆ ಇನ್ನಿತರ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಎ ಬ್ಲಾಕ್ ನಲ್ಲಿರುವ ಎಲ್ಲ ಕೈದಿಗಳ ಹೆಸರನ್ನೂ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.
Mangalore Jail staff assaulted and threatened by A block jail inmates, case filed at barke police station
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am