ಬ್ರೇಕಿಂಗ್ ನ್ಯೂಸ್
15-01-25 10:47 pm Udupi Correspondent ಕರಾವಳಿ
ಉಡುಪಿ, ಜ.16: ರಾತ್ರಿ ವೇಳೆ ಯಕ್ಷಗಾನ ನಡೆಯುತ್ತಿದ್ದಾಗ ಪೊಲೀಸ್ ಅನುಮತಿ ಪಡೆದಿಲ್ಲ ಎಂಬ ಕಾರಣವೊಡ್ಡಿ ಅರ್ಧಕ್ಕೆ ನಿಲ್ಲಿಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಠಾಣೆ ವ್ಯಾಪ್ತಿಯ ಶಿರ್ಲಾಲಿನಲ್ಲಿ ನಡೆದಿದೆ.
ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಆಯೋಜನೆಗೊಂಡಿತ್ತು. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸಲು ಸುಪ್ರೀಂ ಕೋರ್ಟ್ ಅನುಮತಿ ಇಲ್ಲ ಎಂದು ಅಜೆಕಾರು ಉಪನಿರೀಕ್ಷಕ ಶುಭಕರ್ ಆಕ್ಷೇಪ ಎತ್ತಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಕಾರ್ಯಕ್ರಮ ನಿಲ್ಲಿಸದಿದ್ದರೆ ಯಕ್ಷಗಾನ ಮಂಡಳಿ ಅಧ್ಯಕ್ಷನನ್ನು ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಯಕ್ಷಗಾನಕ್ಕಾಗಿ ಜನವರಿ 10 ರಂದು ಪಂಚಾಯತ್ ಪರವಾನಿಗೆ ಪಡೆಯಲು ಪಿಡಿಒ ಬಳಿ ಆಯೋಜಕರು ತೆರಳಿದ್ದರು. ಮೂರು ದಿನಗಳ ರಜೆಯಿದ್ದ ಕಾರಣಕ್ಕೆ ಪಂಚಾಯತ್ ಅನುಮತಿ ದೊರಕಿರಲಿಲ್ಲ. ಜನವರಿ 13ರಂದು ಅನುಮತಿಗಾಗಿ ಆಯೋಜಕರು ಅಜೆಕಾರು ಠಾಣೆಗೆ ತೆರಳಿದ್ದರು. ಈ ವೇಳೆ, ಪಂಚಾಯತ್ ಅನುಮತಿ ತರುವಂತೆ ಪೊಲೀಸರು ತಾಕೀತು ಮಾಡಿದ್ದಾರೆ. ಹೀಗಾಗಿ ಧ್ವನಿವರ್ಧಕ ಬಳಸಲು ಅನುಮತಿ ಸಿಕ್ಕಿರಲಿಲ್ಲ.
ಇದೇ ನೆಪದಲ್ಲಿ ಪೊಲೀಸರು ಯಕ್ಷಗಾನ ನಿಲ್ಲಿಸಲು ಮುಂದಾಗಿದ್ದಾರೆ. ಆದರೆ ಗ್ರಾಮಸ್ಥರು ಯಾವುದೇ ಕಾರಣಕ್ಕೂ ಯಕ್ಷಗಾನ ನಿಲ್ಲಿಸಲು ಬಿಡಲ್ಲ ಎಂದು ತಡೆದಿದ್ದಾರೆ. ಈ ಬಗ್ಗೆ ಯಕ್ಷಗಾನ ಮಂಡಳಿ ಅಧ್ಯಕ್ಷ ಸದಾನಂದ ಶೆಟ್ಟಿ ಮತ್ತು ಮಹಾಲಕ್ಷ್ಮಿ ಸೌಂಡ್ಸ್ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಥಳೀಯರ ದೂರಿನಂತೆ ರಾತ್ರಿ 11.30 ಗಂಟೆಗೆ ಪೊಲೀಸರು ತೆರಳಿ ಧ್ವನಿವರ್ಧಕ ಬಳಸದಂತೆ ತಿಳಿಸಿದರೂ, ಬೆಳಗ್ಗೆ 4.30 ಗಂಟೆಯ ವರೆಗೂ ಮೈಕ್ ಮುಂದುವರಿಸಿದ್ದರು. ಹೀಗಾಗಿ ಅನುಮತಿ ಪಡೆಯದೆ ರಾತ್ರಿ ವೇಳೆ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಆಯೋಜಕರ ಮೇಲೆ ಅಜೆಕಾರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 02/25 ಕಲಂ. 292 BNS ಮತ್ತು 37 KP Act. ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A Yakshagana performance in Mundli, near Jarkala, Shirlal village in Karkala taluk, was halted by police on Tuesday night. The authorities intervened, citing the absence of permission to use loudspeakers. This action sparked outrage among the villagers.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm