ಬ್ರೇಕಿಂಗ್ ನ್ಯೂಸ್
17-01-25 11:10 pm Mangalore Correspondent ಕರಾವಳಿ
ಮಂಗಳೂರು, ಜ.17: ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿ ವತಿಯಿಂದ ಶುಕ್ರವಾರ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ ಬಹು ಸಂಸ್ಕೃತಿ ಉತ್ಸವ ಉದ್ಘಾಟನೆಯೇ ಆಗದೆ ನಾಮ್ಕೇವಾಸ್ತೆ ಎನ್ನುವ ರೀತಿ ಮುಗಿದು ಹೋಗಿದೆ. ಅಕಾಡೆಮಿಗಳ ಪದಾಧಿಕಾರಿಗಳು ಅತ್ಯಂತ ಆಸ್ಥೆಯಿಂದ ವ್ಯವಸ್ಥೆ ಮಾಡಿದ್ದರು. ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡಬೇಕೆಂದು ಮತ್ತೆ ಮತ್ತೆ ಮುಂದೂಡಿಕೆ ಆದರೂ ಆಯೋಜನೆ ಮಾಡಿದ್ದರು.
ಹೀಗಾಗಿ ಮೂರು ಬಾರಿ ದಿನಾಂಕ ನಿಗದಿಯಾದರೂ ಅನಿವಾರ್ಯ ಕಾರಣಗಳಿಂದ ಮುಂದೂಡಲ್ಪಟ್ಟು ನಾಲ್ಕನೇ ಬಾರಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕೊನೆಗೂ ಮುಹೂರ್ತ ಕೂಡಿ ಬಂತು ಎಂದುಕೊಂಡು ಅಕಾಡೆಮಿ ಮುಖ್ಯಸ್ಥರು ಮುಖ್ಯಮಂತ್ರಿ ಬರುವಿಕೆಗಾಗಿ ಇಡೀ ದಿನ ಕಾದು ಕುಳಿತರು. ಆದರೆ ಉದ್ಘಾಟನೆ ಮಾಡಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಬಂದರೂ ಕಾರ್ಯಕ್ರಮ ನಡೆಯುವ ಪುರಭವನಕ್ಕೆ ಬರಲೇ ಇಲ್ಲ.

ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಪ್ರವಾಸ ಪಟ್ಟಿಯಲ್ಲೂ ಉಲ್ಲೇಖಿಸಲಾಗಿತ್ತು. ಅಲ್ಲದೆ, ಕಾರ್ಯಕ್ರಮವನ್ನು 12 ಗಂಟೆ ವೇಳೆಗೆ ಸಿಎಂ ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡುತ್ತಾರೆಂದು ಆಮಂತ್ರಣ ಪತ್ರಿಕೆ ಮತ್ತು ಮಾಧ್ಯಮಗಳಲ್ಲೂ ಬಂದಿತ್ತು. ಆದರೆ ಉದ್ಘಾಟನೆಗೆ ಆಗಮಿಸಬೇಕಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ಹೀಗಾಗಿ ಬಹು ಸಂಸ್ಕೃತಿ ಉತ್ಸವ ಉದ್ಘಾಟನೆಯೇ ಆಗದೆ ಮುಗಿದು ಹೋಗಿದೆ. ವಿವಿಧ ಅಕಾಡಮಿಗಳ ನೇತೃತ್ವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಿದ್ದರೂ, ಒಟ್ಟು ಉತ್ಸವ ಅಷ್ಟಕ್ಕೇ ಸೀಮಿತ ಆಗುವಂತಾಯ್ತು. ಸಂಜೆ ನಾಲ್ಕು ಗಂಟೆ ವರೆಗೆ ಅಧಿಕಾರಿ ವರ್ಗ, ಅಕಾಡೆಮಿ ಮುಖ್ಯಸ್ಥರು ಕಾದು ಕುಳಿತರೂ ಮುಖ್ಯಮಂತ್ರಿ ಬರಲಿಲ್ಲ. ಮೇರಿಹಿಲ್ ನಲ್ಲಿ ರಾಜೀವ ಗಾಂಧಿ ಆರೋಗ್ಯ ವಿವಿ ಕಾರ್ಯಕ್ರಮ ಮಧ್ಯಾಹ್ನ ಮುಗಿಸಿದ ಬಳಿಕ ಎಂಎಲ್ಸಿ ಐವಾನ್ ಡಿಸೋಜ ಮನೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಿದ್ದರಾಮಯ್ಯ ಮತ್ತು ದಂಡು ಅಲ್ಲಿಗೆ ಹೋದವರು, ಅಲ್ಲಿರುವಾಗಲೇ ಬ್ಯಾಂಕ್ ದರೋಡೆ ಸುದ್ದಿ ಬಂದಿದ್ದರಿಂದ ಪೊಲೀಸ್ ಅಧಿಕಾರಿಗಳನ್ನು ಕರೆದು ತುರ್ತು ಸಭೆಯನ್ನೇನೋ ಮಾಡಿದರು. ತಾವು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮ ಮರೆತೇ ಬಿಟ್ಟರು.
Chief minister Siddaramaiah, by not attending the opening ceremony of Bahusamskrithi Utsava (multicultural festival) at Kudmul Ranga Rao Town Hall on Friday, caused discomfort among representatives from six academies, performing groups from across the state, and numerous spectators who gathered for the event.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am