ಬ್ರೇಕಿಂಗ್ ನ್ಯೂಸ್
15-12-20 05:59 pm Mangalore Correspondent ಕರಾವಳಿ
ಮಂಗಳೂರು, ಡಿ.15: ರಸ್ತೆ ಬದಿ ಎಲ್ಲೆಂದರಲ್ಲಿ ನಿಲ್ಲಿಸುವ ವಾಹನಗಳನ್ನು ಟೋಯಿಂಗ್ ವಾಹನದಲ್ಲಿ ಬರುವ ಪೊಲೀಸರು ಹೊತ್ತೊಯ್ಯುತ್ತಾರೆ. ಆದರೆ, ಹೀಗೆ ಟೋಯಿಂಗ್ ಮಾಡುವ ವಾಹನವೇ ಆರ್ ಟಿಓ ನಿಯಮಗಳನ್ನು ಉಲ್ಲಂಘಿಸಿದ್ದರೆ ಯಾರು ಅದಕ್ಕೆ ದಂಡ ಹಾಕಬೇಕು. ಮಂಗಳೂರಿನಲ್ಲಿ ಅಂಥದ್ದೇ ಪ್ರಕರಣ ಪತ್ತೆಯಾಗಿದ್ದು, ಸಾರ್ವಜನಿಕರ ಆಕ್ರೋಶ ಪೊಲೀಸರ ಟೋಯಿಂಗ್ ವಾಹನದ ವಿರುದ್ಧವೇ ತಿರುಗಿದೆ.
ಹತ್ತಾರು ವಾಹನಗಳನ್ನು ಏಕಕಾಲದಲ್ಲಿ ಹೊತ್ತೊಯ್ಯುವ ಟೋಯಿಂಗ್ ವಾಹನವೊಂದು ವಿಮೆ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ನವೀಕರಿಸದೆ ನಿಯಮಗಳನ್ನು ಉಲ್ಲಂಘಿಸಿ ಒಂದು ವರ್ಷದಿಂದ ಕಾರ್ಯಾಚರಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ರಸ್ತೆ ಬದಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿ ನಿಲ್ಲಿಸುವ ದ್ವಿಚಕ್ರ ವಾಹನಗಳನ್ನು ಟೋಯಿಂಗ್ ವಾಹನಗಳಿಂದ ಕಷ್ಟಕ್ಕೆ ಒಳಗಾಗದವರೇ ಇಲ್ಲ ಎನ್ನಬಹುದು. ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳು ಟೋಯಿಂಗ್ ಕಾರಣದಿಂದಾಗಿ ಸ್ವಲ್ಪ ಹೊತ್ತಲ್ಲಿ ಮಾಯ ಆಗಿಬಿಡುತ್ತದೆ.

ಟೋಯಿಂಗ್ ವಾಹನದಿಂದ ಕಿರಿಕಿರಿ ಅನುಭವಿಸಿದ ದ್ವಿಚಕ್ರ ವಾಹನ ಸವಾರರೊಬ್ಬರು, ಇದೀಗ ಟೋಯಿಂಗ್ ವಾಹನದ ಜಾತಕ ಹೇಗಿದೆ ಎಂದು ಆರ್ ಟಿಓದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ವಾಹನದ ಇನ್ಶೂರನ್ಸ್ 2019ರ ಮೇ ತಿಂಗಳಲ್ಲಿ ಲ್ಯಾಪ್ಸ್ ಆಗಿರುವುದು ಗಮನಕ್ಕೆ ಬಂದಿದೆ. ಫಿಟ್ನೆಸ್ ಚೆಕ್ ಮಾಡಿದಾಗ, ಅದೂ ನವೀಕರಣ ಆಗಿರಲಿಲ್ಲ. ಹೀಗಾಗಿ ಈ ವಿಚಾರವನ್ನು ಟ್ರಾಫಿಕ್ ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರ ಸೂಚನೆ ಮೇರೆಗೆ ಸದ್ರಿ ವಾಹನವನ್ನು ಕೆಲವು ದಿನಗಳಿಂದ ಟೋಯಿಂಗ್ ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ.
ಟೋಯಿಂಗ್ ಕರ್ತವ್ಯಕ್ಕೆ ಮಂಗಳೂರಿನಲ್ಲಿ ನಾಲ್ಕು ವಾಹನಗಳಿದ್ದು ಬೆಂಗಳೂರಿನ ವ್ಯಕ್ತಿ ಕಂಟ್ರಾಕ್ಟ್ ಪಡೆದಿದ್ದಾರೆ. ಅದರಲ್ಲಿ ಒಂದನ್ನು ಲಾಕ್ಡೌನ್ ಸಂದರ್ಭದಲ್ಲಿ ಫಿಟ್ನೆಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಕಳಿಸಿದ್ದು, ಅದಿನ್ನೂ ಮರಳಿ ಬಂದಿಲ್ಲ. ಮತ್ತೊಂದು ವಾಹನದಲ್ಲಿ ಕಳೆದ ಒಂದು ವರ್ಷದಿಂದ ವಿಮೆ ಮತ್ತು ಫಿಟ್ನೆಸ್ ಇಲ್ಲದೆ, ಆರ್ ಟಿಓ ನಿಯಮ ಉಲ್ಲಂಘಿಸಿ, ಪೊಲೀಸರೇ ಕರ್ತವ್ಯ ನಿಭಾಯಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿರುವುದರಿಂದ ನಿಯಮ ಉಲ್ಲಂಘಿಸಿದ ಟೋಯಿಂಗ್ ವಾಹನಕ್ಕೂ ದಂಡ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
It is gathered that the towing vehicle which carried the vehicles in Mangalore found violating traffic rules or parked in ‘No Parking’ zones away, itself did not have insurance and fitness certificates.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm