ಬ್ರೇಕಿಂಗ್ ನ್ಯೂಸ್
20-01-25 11:05 pm Mangalore Correspondent ಕರಾವಳಿ
ಉಳ್ಳಾಲ, ಜ.20: ಕೋಟೆಕಾರು ಸಹಕಾರ ಬ್ಯಾಂಕಿನ ದರೋಡೆ ಹಿನ್ನೆಲೆಯಲ್ಲಿ ಅಡವಿಟ್ಟ ಚಿನ್ನಾಭರಣದ ಮಾಲೀಕರು ಹಾಗೂ ಎಸ್ಡಿಪಿಐ ಮುಖಂಡರು ಕೆಸಿ ರೋಡ್ ಶಾಖೆಯ ಕಚೇರಿಯಲ್ಲಿ ಬ್ಯಾಂಕ್ನ ಅಧ್ಯಕ್ಷರು ಮತ್ತು ನಿರ್ದೇಶಕರ ಜೊತೆ ಚರ್ಚೆ ನಡೆಸಿದರು. ಅಡವಿಟ್ಟ ಚಿನ್ನಾಭರಣವನ್ನು ಮರಳಿಸಬೇಕು ಎಂದು ಗ್ರಾಹಕರು ಒತ್ತಾಯ ಮಾಡಿದ್ದಾರೆ.
ಇದಕ್ಕೆ ಅಧ್ಯಕ್ಷ ಕೃಷ್ಣ ಶೆಟ್ಟಿ ಸಮಯ ಕೇಳಿದ್ದಕ್ಕೆ ಎಸ್ಡಿಪಿಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಹಕರಿಗೆ ಕಾಯಲು ಸಮಯವಿಲ್ಲ, ತಕ್ಷಣಕ್ಕೆ ಆಡಳಿತ ಮಂಡಳಿ ಸಭೆ ಕರೆದು ಗ್ರಾಹಕರು ಅಡವಿಟ್ಟ ಚಿನ್ನಾಭರಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು. ಅಡವಿಟ್ಟ ಚಿನ್ನದ ಮೌಲ್ಯಕ್ಕೆ ತಕ್ಕಂತೆ ಈಗಿನ ಮೌಲ್ಯವನ್ನು ಅಥವಾ ಚಿನ್ನ ನೀಡುವುದಾಗಿ ಅಧ್ಯಕ್ಷರು ಹೇಳಿದರೂ ಚಿನ್ನದ ಜೊತೆಯಲ್ಲಿ ತೇಮಾನು, ವೇಸ್ಟೇಜ್, ಜಿಎಸ್ಟಿ ಎಲ್ಲವನ್ನು ಭರಿಸಬೇಕೆಂದು ಹೇಳಿದರು.
ಅಂದಾಜು 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ಅಡವಿಟ್ಟ ಬ್ಯಾಂಕ್ ಕಚೇರಿಯಲ್ಲಿ ಕನಿಷ್ಠ ಒಬ್ಬ ಸೆಕ್ಯೂರಿಟಿ ಗಾರ್ಡ್ ಇಲ್ಲದಿರುವುದು ಬ್ಯಾಂಕ್ ಸುರಕ್ಷತೆ ಬಗ್ಗೆ ಸಂಶಯ ಹುಟ್ಟಿಸಿದೆ ಎಂದು ಎಸ್ಡಿಪಿಐ ನಾಯಕ ಇದಾಯತ್ ಮಾರಿಪಳ್ಳ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ಗ್ರಾಹಕರ ಚಿನ್ನಾಭರಣದ ಮೌಲ್ಯಕ್ಕೆ ಸಮನಾಗಿ ಚಿನ್ನ ಅಥವಾ ಮೌಲ್ಯವನ್ನು ನೀಡಲಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು ಕೆಲವು ದಿನದ ಮಟ್ಟಿಗೆ ಗ್ರಾಹಕರು ಸಹಕರಿಸಬೇಕು. ಕೂಡಲೇ ಆಡಳಿತ ಮಂಡಳಿ ಸಭೆ ಕರೆಯಲಿದ್ದೇವೆ ಎಂದು ಬ್ಯಾಂಕ್ ಅಧ್ಯಕ್ಷ ಕೃಷ್ಣ ಶೆಟ್ಟಿ ತಿಳಿಸಿದರು.
ಎಲ್ಲ ಠಾಣೆ ವ್ಯಾಪ್ತಿಯಲ್ಲಿ ಸುರಕ್ಷತೆ ಬಗ್ಗೆ ಸಭೆ
ಕೋಟೆಕಾರು ಬ್ಯಾಂಕಿನ ದರೋಡೆ ಹಿನ್ನಲೆಯಲ್ಲಿ ಸೋಮವಾರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಡಿಸಿಪಿ ರವಿಶಂಕರ್ ನೇತೃತ್ವದಲ್ಲಿ ಠಾಣೆ ವ್ಯಾಪ್ತಿಯ ಎಲ್ಲ ಬ್ಯಾಂಕ್, ಸೊಸೈಟಿ, ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಸಭೆ ನಡೆಸಲಾಗಿದೆ. ಉಳ್ಳಾಲ, ಕಂಕನಾಡಿ ಸೇರಿದಂತೆ ಬಹುತೇಕ ಠಾಣೆ ವ್ಯಾಪ್ತಿಗಳ ಬ್ಯಾಂಕ್ ಗಳು, ಕೋ-ಆಪರೇಟಿವ್ ಸೊಸೈಟಿಗಳು, ಸಹಕಾರಿ ಸಂಘಗಳು ಹಾಗೂ ಜ್ಯುವೆಲ್ಲರಿ ಮಾಲಕರು/ವ್ಯವಸ್ಥಾಪಕರನ್ನು ಕರೆಸಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಸೊತ್ತುಗಳ ರಕ್ಷಣೆಯ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆಗಳನ್ನ ಅಧಿಕಾರಿಗಳು ನೀಡಿದ್ದಾರೆ.
Mangalore Kotekar bank robbery, meeting held between customers sdpi and police in regards to gold deposited
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm