ಬ್ರೇಕಿಂಗ್ ನ್ಯೂಸ್
21-01-25 07:43 pm Mangalore Correspondent ಕರಾವಳಿ
ಮಂಗಳೂರು, ಜ.21: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಕಳವಾದ ಒಟ್ಟು ಚಿನ್ನದ ಬಗ್ಗೆ ಮತ್ತೆ ಮಾಹಿತಿ ನೀಡಿದ್ದಾರೆ. ಒಟ್ಟು 15 ಕೋಟಿಯಷ್ಟು ಚಿನ್ನಾಭರಣ ದರೋಡೆ ಆಗಿದೆ. ಅಲ್ಲದೆ, 11 ಲಕ್ಷ 70 ಸಾವಿರ ನಗದು ಕೂಡ ಕಳವು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಆರೋಪಿ ಕಾಲಿಗೆ ಗುಂಡು ಹಾರಿಸಿದ ಅಲಂಕಾರಗುಡ್ಡೆ ಸ್ಥಳಕ್ಕೆ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಭೇಟಿ ನೀಡಿದ್ದು, ಸ್ಥಳದಲ್ಲಿದ್ದ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಸ್ಥಳೀಯರ ಬಗ್ಗೆ ನಿಮಗೇನಾದರೂ ಸಂಶಯ ಇದೆಯೇ ಎಂದು ಕೇಳಿದ್ದಕ್ಕೆ, ನಮಗೇನೂ ಇಲ್ಲ. ಪೊಲೀಸರು ತನಿಖೆ ನಡೆಸುತ್ತಾರೆ ಎಂದಿದ್ದಾರೆ.
ಒಟ್ಟು ಕಳವಾದ ಚಿನ್ನಾಭರಣದ ಬಗ್ಗೆ ಲೆಕ್ಕಾಚಾರ ಆಗಿದೆಯೇ ಎಂದು ಕೇಳಿದ್ದಕ್ಕೆ, ಎಲ್ಲ ಲೆಕ್ಕ ಮುಗಿದಿದೆ, ಒಟ್ಟು 15 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳವಾಗಿದೆ. ಎಂಟು ಕೋಟಿಯ ಚಿನ್ನ ಲಾಕರಿನಲ್ಲಿ ಉಳಿದಿದೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ. ಮತ್ತೆ ಎಫ್ಐಆರ್ ನಲ್ಲಿ ಕಡಿಮೆ ಯಾಕೆ ತೋರಿಸಿದ್ದು ಎಂದು ಕೇಳಿದ್ದಕ್ಕೆ, ಅದು ಅಂದಾಜು ಹಾಕಿರೋದು, ನಾವು ಆಮೇಲೆ ಹೆಚ್ಚುವರಿ ಇರುವುದನ್ನು ಹೇಳಿದ್ದೇವೆ ಎಂದಿದ್ದಾರೆ.
ಇನ್ಶೂರೆನ್ಸ್ ಎಷ್ಟು ಸಿಗಬಹುದು ಎಂದು ಕೇಳಿದ್ದಕ್ಕೆ, ಇನ್ಶೂರೆನ್ಸ್ 19 ಕೋಟಿ ಇದೆ, ಮಹಜರು ಎಲ್ಲ ಆದಬಳಿಕ ಇನ್ಶೂರೆನ್ಸ್ ಪ್ರಕ್ರಿಯೆ ಆಗುತ್ತದೆ. ಒಂದು ವರ್ಷ ಬೇಕಾಗಬಹುದು. ಎಷ್ಟು ಸಿಗುತ್ತೆ ಎಂದು ನೋಡಬೇಕು ಎಂದು ಹೇಳಿದ್ದಾರೆ. ಪೊಲೀಸರು ಆರಂಭದಲ್ಲಿ 10ರಿಂದ 12 ಕೋಟಿ ಮೌಲ್ಯದ ಚಿನ್ನ ದರೋಡೆಯಾಗಿದೆ ಎಂದು ಹೇಳಿದ್ದರೂ, ಆನಂತರ ನಾಲ್ಕು ಕೋಟಿ ಚಿನ್ನವೆಂದು ಕಡಿಮೆ ತೋರಿಸಿದ್ದರು. ಪೊಲೀಸರ ಈ ನಡೆ ಸಂಶಯಕ್ಕೆ ಕಾರಣವಾಗಿತ್ತು.
Mangalore Kotekar bank robbery, 15 crore worth gold has been stolen says Bank president Krishna Shetty. Speaking to the media persons at the spot where the accused was shot to the leg by police he said that more than 15 crores of gold has been stolen and the FIR will be changed from 4 crores.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm