ಬ್ರೇಕಿಂಗ್ ನ್ಯೂಸ್
23-01-25 02:33 pm Mangalore Correspondent ಕರಾವಳಿ
ಮಂಗಳೂರು, ಜ.23: ನಗರದ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಸೆಂಟರ್ ಒಂದಕ್ಕೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರಿಗೆ ಇಂದು(ಜ.23) ಮಧ್ಯಾಹ್ನ ಹೊತ್ತಿಗೆ ಕೆಲವಾರು ಕಾರ್ಯಕರ್ತರು ಸೇರಿ ದಾಳಿ ನಡೆಸಿದ್ದಾರೆ. ಶ್ರೀರಾಮ ಸೇನೆ ಸಂಘಟನೆಯ ಪ್ರಸಾದ್ ಅತ್ತಾವರ ನೇತೃತ್ವದ ಹುಡುಗರು ದಾಳಿ ನಡೆಸಿದ್ದಾಗಿ ತಿಳಿದುಬಂದಿದೆ.
ಮಸಾಜ್ ಪಾರ್ಲರ್ ಒಳಗಿನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ ಗಳನ್ನು ಪುಡಿಗಟ್ಟಿದ್ದು, ಅಲ್ಲಿದ್ದ ಹುಡುಗಿಯರಿಗೆ ನೀವು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಾ ಎಂದು ಆವಾಜ್ ಹಾಕಿದ್ದಾರೆ. ಹುಡುಗಿಯರು ಕೈಮುಗಿದು ಹಲ್ಲೆ ಮಾಡಬೇಡಿ ಎಂದು ಬೇಡಿಕೊಳ್ಳುವ ವಿಡಿಯೋ ಇದೆ. ಕಾರ್ಯಕರ್ತರೇ ಜೊತೆಗೆ ಕ್ಯಾಮರಾಮನ್ ಒಬ್ಬನನ್ನು ಕರೆದೊಯ್ದು ದಾಳಿ ನಡೆಸಿರುವಂತೆ ತೋರುತ್ತಿದೆ. ಇದರ ವಿಡಿಯೋವನ್ನು ಕಾರ್ಯಕರ್ತರೇ ಬಿಡುಗಡೆ ಮಾಡಿದ್ದಾರೆ.



\



ಮಾಹಿತಿ ಪ್ರಕಾರ, ಈ ಮಸಾಜ್ ಪಾರ್ಲರನ್ನು ಒಂದು ವರ್ಷದಿಂದ ನಡೆಸುತ್ತಿದ್ದು, ಸುಧೀರ್ ಎಂಬವರಿಗೆ ಸೇರಿದ್ದಾಗಿದೆ. ಮಂಗಳೂರು ನಗರದಲ್ಲಿ ಈ ರೀತಿಯ 16 ಮಸಾಜ್ ಸೆಂಟರ್ ಗಳಿದ್ದು, ಕೆಲವು ಪರವಾನಗಿ ಹೊಂದಿಲ್ಲದೆಯೂ ನಡೆಯುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಇದೇ ರೀತಿ ಕೇಂದ್ರವೊಂದಕ್ಕೆ ದಾಳಿ ನಡೆಸಿದ್ದು ವಿಡಿಯೋ ವೈರಲ್ ಆಗಿತ್ತು. ಆದರೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ಅಕ್ರಮ ಮಸಾಜ್ ಪಾರ್ಲರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದು ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಜರುಗಿಸಿಲ್ಲ. ಇದೀಗ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
Mangalore Unisex saloon at Bejai vandalised by Prasad attavar ram sena members over illegal activities. The activist have vandalised the entire shop alleging of illegal activities in the name of spa. The video of this has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am