ಬ್ರೇಕಿಂಗ್ ನ್ಯೂಸ್
23-01-25 02:33 pm Mangalore Correspondent ಕರಾವಳಿ
ಮಂಗಳೂರು, ಜ.23: ನಗರದ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಸೆಂಟರ್ ಒಂದಕ್ಕೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರಿಗೆ ಇಂದು(ಜ.23) ಮಧ್ಯಾಹ್ನ ಹೊತ್ತಿಗೆ ಕೆಲವಾರು ಕಾರ್ಯಕರ್ತರು ಸೇರಿ ದಾಳಿ ನಡೆಸಿದ್ದಾರೆ. ಶ್ರೀರಾಮ ಸೇನೆ ಸಂಘಟನೆಯ ಪ್ರಸಾದ್ ಅತ್ತಾವರ ನೇತೃತ್ವದ ಹುಡುಗರು ದಾಳಿ ನಡೆಸಿದ್ದಾಗಿ ತಿಳಿದುಬಂದಿದೆ.
ಮಸಾಜ್ ಪಾರ್ಲರ್ ಒಳಗಿನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ ಗಳನ್ನು ಪುಡಿಗಟ್ಟಿದ್ದು, ಅಲ್ಲಿದ್ದ ಹುಡುಗಿಯರಿಗೆ ನೀವು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಾ ಎಂದು ಆವಾಜ್ ಹಾಕಿದ್ದಾರೆ. ಹುಡುಗಿಯರು ಕೈಮುಗಿದು ಹಲ್ಲೆ ಮಾಡಬೇಡಿ ಎಂದು ಬೇಡಿಕೊಳ್ಳುವ ವಿಡಿಯೋ ಇದೆ. ಕಾರ್ಯಕರ್ತರೇ ಜೊತೆಗೆ ಕ್ಯಾಮರಾಮನ್ ಒಬ್ಬನನ್ನು ಕರೆದೊಯ್ದು ದಾಳಿ ನಡೆಸಿರುವಂತೆ ತೋರುತ್ತಿದೆ. ಇದರ ವಿಡಿಯೋವನ್ನು ಕಾರ್ಯಕರ್ತರೇ ಬಿಡುಗಡೆ ಮಾಡಿದ್ದಾರೆ.



\



ಮಾಹಿತಿ ಪ್ರಕಾರ, ಈ ಮಸಾಜ್ ಪಾರ್ಲರನ್ನು ಒಂದು ವರ್ಷದಿಂದ ನಡೆಸುತ್ತಿದ್ದು, ಸುಧೀರ್ ಎಂಬವರಿಗೆ ಸೇರಿದ್ದಾಗಿದೆ. ಮಂಗಳೂರು ನಗರದಲ್ಲಿ ಈ ರೀತಿಯ 16 ಮಸಾಜ್ ಸೆಂಟರ್ ಗಳಿದ್ದು, ಕೆಲವು ಪರವಾನಗಿ ಹೊಂದಿಲ್ಲದೆಯೂ ನಡೆಯುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಇದೇ ರೀತಿ ಕೇಂದ್ರವೊಂದಕ್ಕೆ ದಾಳಿ ನಡೆಸಿದ್ದು ವಿಡಿಯೋ ವೈರಲ್ ಆಗಿತ್ತು. ಆದರೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ಅಕ್ರಮ ಮಸಾಜ್ ಪಾರ್ಲರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದು ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಜರುಗಿಸಿಲ್ಲ. ಇದೀಗ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
Mangalore Unisex saloon at Bejai vandalised by Prasad attavar ram sena members over illegal activities. The activist have vandalised the entire shop alleging of illegal activities in the name of spa. The video of this has gone viral on social media.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm