ಬ್ರೇಕಿಂಗ್ ನ್ಯೂಸ್
23-01-25 05:43 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆಯ ಕಾರ್ಯಕರ್ತರು ದಾಳಿ ನಡೆಸಿದ್ದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ತಿರುವು ಪಡೆದಿದೆ. ಯುವಕರು ಕಾನೂನು ಕೈಗೆತ್ತಿಕೊಂಡಿದ್ದಾರೆಂದು ಮಸಾಜ್ ಪಾರ್ಲರ್ ಮಾಲೀಕನ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದು, ದಾಳಿ ಹೊಣೆ ಹೊತ್ತುಕೊಂಡ ರಾಮ ಸೇನಾ ಮುಖಂಡ ಪ್ರಸಾದ್ ಅತ್ತಾವರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿಯಾದ ಬೆನ್ನಲ್ಲೇ ಮಾಧ್ಯಮದವರು ಪ್ರಸಾದ್ ಅತ್ತಾವರ್ ಪ್ರತಿಕ್ರಿಯೆ ಪಡೆಯಲು ಕುಡುಪು ಬಳಿಯಿರುವ ಅವರ ನಿವಾಸಕ್ಕೆ ತೆರಳಿದ್ದರು. ಅಷ್ಟರಲ್ಲಿಯೇ ಪೊಲೀಸರು ಕೂಡ ಅಲ್ಲಿಗೆ ತಲುಪಿದ್ದರು. ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದಾಗಲೇ ಪೊಲೀಸರು ಪ್ರಸಾದ್ ಅವರನ್ನು ಮನೆಯಿಂದ ಹೊರಕ್ಕೆಳೆದುಕೊಂಡು ಬಂದಿದ್ದಾರೆ. ಆನಂತರ, ಪೊಲೀಸ್ ಕಾರಿನಲ್ಲಿ ಕೂರಿಸಿದ್ದಾರೆ.




ಇದರ ನಡುವೆಯೇ ಮಾಧ್ಯಮಕ್ಕೆ ಹೇಳಿಕೆ ನೀಡಿದ ಪ್ರಸಾದ್ ಅತ್ತಾವರ್, ನಮ್ಮ ಕಾರ್ಯಕರ್ತರೇ ದಾಳಿ ನಡೆಸಿರೋದು. ಸುಮ್ಮನೆ ದಾಳಿ ನಡೆಸಿದ್ದಲ್ಲ. ಅಲ್ಲಿ 15-16 ವರ್ಷದ ಕಾಲೇಜು ಹುಡುಗಿಯರನ್ನು ತಂದಿಟ್ಟು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದರು. ಇದರ ಬಗ್ಗೆ ಪೊಲೀಸರು ಕ್ರಮ ಜರುಗಿಸಿರಲಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಅವರನ್ನು ಬಂಧನ ಮಾಡಿದ್ದು, ಇತರೇ ಕಾರ್ಯಕರ್ತರ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ 8-10 ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಿದ್ದರು.
Attack on saloon: Ram Sena Leader Prasad Attavar was arrested by CCB police in Mangalore while he was talking to media persons at his residence. Colours unisex saloon was vandalised by Ram Sena activists alleging illegal activity.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm