ಬ್ರೇಕಿಂಗ್ ನ್ಯೂಸ್
27-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.27: ಮಂಗಳೂರು ನಗರ ವ್ಯಾಪ್ತಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಪಾಂಡೇಶ್ವರ ಠಾಣೆ ವ್ಯಾಪ್ತಿಯ ಅತ್ತಾವರದ ಮಣಿಪಾಲ್ ಶಾಲೆ, ಜಪ್ಪಿನಮೊಗರು ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜು ಹಾಗೂ ನೀರುಮಾರ್ಗ ಬಳಿಯ ಕೇಂಬ್ರಿಡ್ಜ್ ಶಾಲೆಗಳಿಗೆ ಆವರಣದಲ್ಲಿ ಐಇಡಿ ಬಾಂಬ್ ಗಳಿವೆ ಎಂದು ಬೆದರಿಕೆ ಇಮೇಲ್ಗಳು ಬಂದಿದ್ದವು. ಬಾಂಬ್ ಬೆದರಿಕೆ ಇಮೇಲ್ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ತೆರಳಿ ತಪಾಸಣೆ ನಡೆಸಿದ್ದಾರೆ. ಅಲ್ಲದೆ, ಬಾಂಬ್ ನಿಷ್ಕ್ರಿಯ ದಳಗಳು ಸಂಪೂರ್ಣ ತಪಾಸಣೆ ನಡೆಸಿವೆ.
ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷತೆಗಾಗಿ ಶಾಲೆಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಲನವಲನ ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಬೆದರಿಕೆ ಇಮೇಲ್ಗಳಿಗೆ ಸಂಬಂಧಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದು ವಿವರವಾದ ತನಿಖೆ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಉಡುಪಿ ಶಾಲೆಯಲ್ಲೂ ಬೆದರಿಕೆ ಇಮೇಲ್
ಉಡುಪಿ ನಗರದ ಶಾರದಾ ರೆಸಿಡೆನ್ಸಿ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಶಾಲೆಯ ಸಿಬ್ಬಂದಿ ಭಯಕ್ಕೀಡಾಗಿ ಮಕ್ಕಳನ್ನು ಹೊರಕ್ಕೆ ಕಳಿಸಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದೆ. ಶಾಲೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಮೈದಾನದಲ್ಲಿ ಇರಿಸಿದ್ದಾರೆ. ಪೊಲೀಸರು ತಪಾಸಣೆ ಬಳಿಕ ಹುಸಿ ಬೆದರಿಕೆ ಎಂದು ಖಚಿತ ಪಡಿಸಿದ್ದಾರೆ.
Mangalore Udupi schools receive hoax bomb threat, police deployed for additional security. According to sources, the email claiming presence of explosive material was received by Manipal School in Attavar under the Pandeshwar Police Station limits, Presidency and Cambridge School in Neermarga under the Mangaluru Rural Police Station limits.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am