ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm