ಬ್ರೇಕಿಂಗ್ ನ್ಯೂಸ್
01-02-25 02:32 pm Mangalore Correspondent ಕರಾವಳಿ
ಮಂಗಳೂರು, ಫೆ.1: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ಮತ್ತು ಯೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಲಾಗಿತ್ತು. ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಫೆ.3ರ ವರೆಗೆ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ಸ್ಥಳ ಮಹಜರು ಉದ್ದೇಶಕ್ಕಾಗಿ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ಗಾಯಾಳು ಆರೋಪಿಯನ್ನು ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



ಘಟನೆ ಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಎಂಬವರಿಗೆ ಗಾಯವಾಗಿದೆ. ಮಂಜುನಾಥ್ ಮೇಲೆ ಹಲ್ಲೆ ನಡೆಸಿ ಮುರುಗನ್ ಪರಾರಿಯಾಗಲು ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಕಣ್ಣನ್ ಮಣಿಯನ್ನು ಬಂಧಿಸಿ, ಸ್ಥಳ ಮಹಜರು ಕರೆದೊಯ್ದಿದ್ದಾಗಲೂ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದರು. ಇದೀಗ ಎರಡನೇ ಬಾರಿಗೆ ಗುಂಡು ಹಾರಿಸಿದ್ದಾರೆ.
ಅಜ್ಜಿನಡ್ಕದಲ್ಲಿ ರಿವಾಲ್ವರ್ ಎಸೆದು ಹೋಗಿದ್ದರಂತೆ !
ಪೊಲೀಸ್ ಮಾಹಿತಿ ಪ್ರಕಾರ, ಆರೋಪಿಗಳು ದರೋಡೆ ಕೃತ್ಯದ ಮೊದಲು ಅಜ್ಜಿನಡ್ಕ ಎಂಬಲ್ಲಿ ತಮ್ಮ ರಿವಾಲ್ವರನ್ನು ಎಸೆದು ಹೋಗಿದ್ದರು. ರಿವಾಲ್ವರ್ ಪತ್ತೆ ಮಾಡಲು ಪ್ರಮುಖ ಆರೋಪಿ ಮುರುಗನ್ ದೇವರ್ ನನ್ನು ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಉಳ್ಳಾಲ ಠಾಣೆಯ ಪೇದೆ ಮಂಜುನಾಥ್ ಅವರ ಮರ್ಮಾಂಗಕ್ಕೆ ತುಳಿದು ಮುರುಗನ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಪ್ಪಿಸಲು ಯತ್ನಿಸಿದ ಆರೋಪಿ ಮುರುಗನ್ ಮೇಲೆ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸ್ಥಳದಲ್ಲಿ ರಿವಾಲ್ವರ್ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮೆಟಲ್ ಡಿಟೆಕ್ಟರ್ ತಂಡವನ್ನೂ ಸ್ಥಳಕ್ಕೆ ಕರೆಸಿದ್ದಾರೆ.
Mangalore Kotekar bank robbery case, main accused Murgan D shot to leg while trying to attack on police at Adyanadka while police took him to spot mahajar.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm