ಬ್ರೇಕಿಂಗ್ ನ್ಯೂಸ್
01-02-25 07:47 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ದೆಹಲಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರತಿದಿನ ಸಂಚರಿಸಲಿದೆ. ಫೆ.1ರಿಂದಲೇ ಈ ವಿಮಾನ ಯಾನ ಆರಂಭಗೊಂಡಿದ್ದು, ಬೆಳಗ್ಗೆ 6.40ಕ್ಕೆ ಮಂಗಳೂರಿನಿಂದ ಹೊರಟು 9.35ಕ್ಕೆ ದೆಹಲಿಗೆ ತಲುಪಿದೆ. ಆಮೂಲಕ ಕರಾವಳಿಯಿಂದ ರಾಜಧಾನಿ ದೆಹಲಿಯನ್ನು ಏರ್ ಇಂಡಿಯಾ ಇನ್ನಷ್ಟು ಹತ್ತಿರವಾಗಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 1552 ಹೆಸರಿನ ವಿಮಾನವು ಮಂಗಳೂರಿನಿಂದ 167 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಲುಪಿದೆ. ಇದೇ ವೇಳೆಗೆ ಪ್ರತಿಯಾಗಿ ದೆಹಲಿಯಿಂದಲೂ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ಮಂಗಳೂರಿಗೆ ವಿಮಾನ ಆಗಮಿಸಿದೆ. ದೆಹಲಿಯಿಂದ ಹೊರಟ ವಿಮಾನವನ್ನು ಕ್ಯಾಪ್ಟನ್ ವಿನೀತ್ ಕುಮಾರ್ ಮತ್ತು ಸಿಬಂದಿ ಮುನ್ನಡೆಸಿದ್ದಾರೆ. ದೆಹಲಿಯಿಂದ ಬಂದ ವಿಮಾನದಲ್ಲಿ 144 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನಿಂದ ಹೊರಟ ವಿಮಾನಕ್ಕೆ ಏರೋ ಡ್ರೋಮ್ ರೆಸ್ಕ್ಯು ತಂಡದಿಂದ ನೀರು ಹಾಯಿಸುವ ಮೂಲಕ ಶುಭ ಹಾರೈಕೆ ನೀಡಲಾಯಿತು. ಕಳೆದ ಜನವರಿ 4ರಿಂದ ಪ್ರತಿ ಶನಿವಾರ ಮಂಗಳೂರಿನಿಂದ ಪುಣೆಗೆ ಹೊಸ ವಿಮಾನ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ರಾಜಧಾನಿ ದೆಹಲಿಗೂ ಪ್ರತಿ ದಿನದ ವಿಮಾನ ಸಂಚಾರ ಆರಂಭಿಸಿದೆ. ನೇರ ವಿಮಾನ ಸಂಚಾರದಿಂದ ಮಂಗಳೂರಿನಿಂದ ಬಿಸಿನೆಸ್ ಇನ್ನಿತರ ಉದ್ದೇಶಕ್ಕೆ ದೆಹಲಿಗೆ ಹೋಗುವವರಿಗೆ ಸುಗಮವಾಗಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯಿಂದ ದಿನವೂ ಸಂಜೆ ದೆಹಲಿಗೆ ವಿಮಾನ ಸಂಚಾರ ಇದೆ. ಇದರೊಂದಿಗೆ ಬೆಳಗ್ಗೆ, ಸಂಜೆ ಡೈಲಿ ವಿಮಾನ ಸಂಚಾರ ಮಾಡಿದಂತಾಗಿದೆ.
Air India Express commenced a direct flight service between Mangalore and Delhi. The initiative offers a direct daily morning service between the two cities.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm