ಬ್ರೇಕಿಂಗ್ ನ್ಯೂಸ್
07-02-25 10:13 pm Mangalore Correspondent ಕರಾವಳಿ
ಮಂಗಳೂರು, ಫೆ.7: ಕೋವಿಡ್ ಸೋಂಕು ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದಾಗಿ ಜನಸಾಮಾನ್ಯರಲ್ಲಿ ಹೃದಯ, ನರ ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಹಠಾತ್ ಸಾವುಗಳು ಸಂಭವಿಸುತ್ತಿವೆ ಎಂಬುದಾಗಿ ಸಾರ್ವಜನಿಕರಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಠಾತ್ ಸಾವುಗಳ ಕುರಿತಾಗಿ ಅಧ್ಯಯನ ನಡೆಸಲು ಆರೋಗ್ಯ ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಹಠಾತ್ ಸಾವುಗಳ ಕುರಿತು ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸುವಂತೆ ಸಿಎಂ ಸೂಚಿಸಿದ್ದು, ಸಮಿತಿಯ ವರದಿ ಆಧರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವಜನರಲ್ಲಿ ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹಠಾತ್ ಸಾವು ಸಂಭವಿಸುತ್ತಿರುವುದರಿಂದ ಅವಲಂಬಿತ ಕುಟುಂಬಗಳು ಆರ್ಥಿಕ, ಸಾಮಾಜಿಕ ಸಮಸ್ಯೆಗಳಿಗೆ ತುತ್ತಾಗುತ್ತಿದೆ. ಈ ಸಾವುಗಳು ಕೋವಿಡ್ ಸೋಂಕು ಅಥವಾ ಲಸಿಕೆಯ ಅಡ್ಡ ಪರಿಣಾಮದಿಂದ ಕಾರಣಕ್ಕೆ ಉಂಟಾಗುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇಂತಹ ಸಾವುಗಳ ಬಗ್ಗೆ ಅಧ್ಯಯನ ನಡೆಸಿ ಹಠಾತ್ ಸಾವುಗಳನ್ನು ತಡೆಗಟ್ಟುವ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಮೇಲ್ ಸಂದೇಶದ ಮೂಲಕ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ತಜ್ಞರ ಸಮಿತಿಯನ್ನು ರಚಿಸಿ, ವರದಿಯನ್ನು ಆಧರಿಸಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
Karnataka will form an expert committee to study the cause of rising cases of sudden deaths among young people.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am