ಬ್ರೇಕಿಂಗ್ ನ್ಯೂಸ್
16-12-20 04:48 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕದ ದರಿದ್ರ ಬಿಜೆಪಿ ಸರಕಾರ ಪಂಚಾಯತ್ ಚುನಾವಣೆಯನ್ನೂ ಸರಿಯಾಗಿ ನಿರ್ವಹಿಸುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಆಟವಾಡಿದ ಬಿಜೆಪಿ ಈಗ ಕಾಂಗ್ರೆಸ್ ಬೆಂಬಲಿತರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ಹೆದರಿಸಿ, ಬೆದರಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿಸಿ, ಕೆಲವು ಕಡೆ ಅವಿರೋಧ ಆಯ್ಕೆ ಆಗಿದೆ. ಹೀಗಾಗಿ ಈ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತದೆ ಎನ್ನುವ ಭರವಸೆ ಇಲ್ಲ. ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬಿಜೆಪಿಯ ಈ ರೀತಿಯ ವರ್ತನೆಗೆ ಈ ಬಾರಿ ಮತದಾರರೇ ತಕ್ಕ ಉತ್ತರ ನೀಡಬೇಕಾಗಿದೆ. ಜನವಿರೋಧಿ ಸರಕಾರದ ವಿರುದ್ಧ ಮತದಾರರು ಮತ ಚಲಾವಣೆಯ ಮೂಲಕ ಉತ್ತರ ನೀಡಬೇಕು. ಆದರೆ, ಇದು ಪಾರದರ್ಶಕ ಚುನಾವಣೆ ನಡೆದರಷ್ಟೇ ಸಾಧ್ಯ ಎಂದು ಹೇಳಿದರು.
ಪರಿಷತ್ತಿನಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ !
ಇದೇ ವೇಳೆ, ವಿಧಾನ ಪರಿಷತ್ತಿನಲ್ಲಿ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಬಿಜೆಪಿಯೇ ಕಾರಣ. ಒಂದ್ಕಡೆ ಸಭಾಪತಿಯ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಲಾಗಿತ್ತು. ಮತ್ತೊಂದ್ಕಡೆ ಬಿಜೆಪಿಯವರು ಬಾಗಿಲು ಹಾಕಿ ಸಭಾಪತಿಯನ್ನು ತಡೆದಿದ್ದರು. ಹೀಗೆ ತಡೆದಿದ್ದು ಕಾಂಗ್ರೆಸ್ ಸದಸ್ಯರನ್ನು ಪ್ರಚೋದಿಸುವಂತೆ ಮಾಡಿತ್ತು. ಇದರಿಂದ ಕೆರಳಿ, ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯವರು ಬಾಗಿಲು ಹಾಕಿದ್ದು ಸರಿಯಾ ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿಯವರ ಈ ರೀತಿಯ ಕ್ರಿಯೆಗೆ ಆ ರೀತಿಯ ಪ್ರತಿಕ್ರಿಯೆ ಆಗಿದೆ ಅಷ್ಟೇ. ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇದ್ದಾಗ, ಇಂಥದ್ದೇ ಘಟನೆ ನಡೆದಿತ್ತು. ಬಾಗಿಲು ಹಾಕಿ ಕಲಾಪ ನಡೆಸಿದ್ದರು. ಯಡಿಯೂರಪ್ಪ ಸರಕಾರ ಇರುವಾಗಲೇ ಯಾಕೆ ಇಂಥ ಘಟನೆಗಳಾಗುತ್ತವೆ ಎಂದು ಪ್ರಶ್ನಿಸಿದರು.
Video:
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm