ಬ್ರೇಕಿಂಗ್ ನ್ಯೂಸ್
16-12-20 04:48 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕದ ದರಿದ್ರ ಬಿಜೆಪಿ ಸರಕಾರ ಪಂಚಾಯತ್ ಚುನಾವಣೆಯನ್ನೂ ಸರಿಯಾಗಿ ನಿರ್ವಹಿಸುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಆಟವಾಡಿದ ಬಿಜೆಪಿ ಈಗ ಕಾಂಗ್ರೆಸ್ ಬೆಂಬಲಿತರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ಹೆದರಿಸಿ, ಬೆದರಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿಸಿ, ಕೆಲವು ಕಡೆ ಅವಿರೋಧ ಆಯ್ಕೆ ಆಗಿದೆ. ಹೀಗಾಗಿ ಈ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತದೆ ಎನ್ನುವ ಭರವಸೆ ಇಲ್ಲ. ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬಿಜೆಪಿಯ ಈ ರೀತಿಯ ವರ್ತನೆಗೆ ಈ ಬಾರಿ ಮತದಾರರೇ ತಕ್ಕ ಉತ್ತರ ನೀಡಬೇಕಾಗಿದೆ. ಜನವಿರೋಧಿ ಸರಕಾರದ ವಿರುದ್ಧ ಮತದಾರರು ಮತ ಚಲಾವಣೆಯ ಮೂಲಕ ಉತ್ತರ ನೀಡಬೇಕು. ಆದರೆ, ಇದು ಪಾರದರ್ಶಕ ಚುನಾವಣೆ ನಡೆದರಷ್ಟೇ ಸಾಧ್ಯ ಎಂದು ಹೇಳಿದರು.
ಪರಿಷತ್ತಿನಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ !
ಇದೇ ವೇಳೆ, ವಿಧಾನ ಪರಿಷತ್ತಿನಲ್ಲಿ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಬಿಜೆಪಿಯೇ ಕಾರಣ. ಒಂದ್ಕಡೆ ಸಭಾಪತಿಯ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಲಾಗಿತ್ತು. ಮತ್ತೊಂದ್ಕಡೆ ಬಿಜೆಪಿಯವರು ಬಾಗಿಲು ಹಾಕಿ ಸಭಾಪತಿಯನ್ನು ತಡೆದಿದ್ದರು. ಹೀಗೆ ತಡೆದಿದ್ದು ಕಾಂಗ್ರೆಸ್ ಸದಸ್ಯರನ್ನು ಪ್ರಚೋದಿಸುವಂತೆ ಮಾಡಿತ್ತು. ಇದರಿಂದ ಕೆರಳಿ, ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯವರು ಬಾಗಿಲು ಹಾಕಿದ್ದು ಸರಿಯಾ ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿಯವರ ಈ ರೀತಿಯ ಕ್ರಿಯೆಗೆ ಆ ರೀತಿಯ ಪ್ರತಿಕ್ರಿಯೆ ಆಗಿದೆ ಅಷ್ಟೇ. ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇದ್ದಾಗ, ಇಂಥದ್ದೇ ಘಟನೆ ನಡೆದಿತ್ತು. ಬಾಗಿಲು ಹಾಕಿ ಕಲಾಪ ನಡೆಸಿದ್ದರು. ಯಡಿಯೂರಪ್ಪ ಸರಕಾರ ಇರುವಾಗಲೇ ಯಾಕೆ ಇಂಥ ಘಟನೆಗಳಾಗುತ್ತವೆ ಎಂದು ಪ್ರಶ್ನಿಸಿದರು.
Video:
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm