ಬ್ರೇಕಿಂಗ್ ನ್ಯೂಸ್
15-02-25 04:59 pm Mangalore Correspondent ಕರಾವಳಿ
ಮಂಗಳೂರು, ಫೆ.15: ಬಿಜೆಪಿಗರ ರಾಜಕೀಯ ಮೇಲಾಟದಲ್ಲಿ ಒಮ್ಮೆ ಉದ್ಘಾಟನೆಯಾಗಿದ್ದ ನಗರದ ಜಪ್ಪಿನಮೊಗರಿನ ಹೊಸ ಆರೋಗ್ಯ ಕೇಂದ್ರವನ್ನು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತೆ ಉದ್ಘಾಟನೆ ಮಾಡಿದ್ದಾರೆ. ಇದೇ ವೇಳೆ, ಸಚಿವರು ಬಿಜೆಪಿ ನಾಯಕರು ಡರ್ಟಿ ಪಾಲಿಟಿಕ್ಸ್ ಮಾಡಿದ್ದಾರೆ. ರಾಜಕೀಯ ವಾತಾವರಣ ಕೆಡಿಸುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಉದ್ಘಾಟನೆ ಕಾರ್ಯಕ್ರಮದ ಬಳಿಕ ಸಮಾರಂಭದಲ್ಲಿ ಮಾತನಾಡಿದ ಸಚಿವ ಗುಂಡೂರಾವ್, ನೇರವಾಗಿ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಕಿಡಿಕಾರಿದರು. ಇವರು ಚೀಪ್ ರಾಜಕೀಯ ಮಾಡುತ್ತಿದ್ದಾರೆ. ನಾವು ಎಲ್ಲರನ್ನು ಕರೆದು ಬೆಂಗಳೂರಿನಲ್ಲಿ ಇನ್ವೆಸ್ಟ್ ಕರ್ನಾಟಕ ಮಾಡಿಲ್ವಾ.. ಅಭಿವೃದ್ಧಿ ವಿಚಾರದಲ್ಲಿ ಈ ರೀತಿ ಡರ್ಟಿ ರಾಜಕೀಯ ಮಾಡೋದಾ.. ಇವರು ತಮ್ಮ ಸ್ವಂತ ದುಡ್ಡಿನಲ್ಲಿ ಮಾಡಿದ್ದಲ್ಲ, ಇವರದೇ ಹಣ, ಭೂಮಿ ಆಗಿರುತ್ತಿದ್ದರೆ ಕೇಳುತ್ತಿರಲಿಲ್ಲ. ನಾನೇನು ವರ್ಷಕ್ಕೊಮ್ಮೆ ಬರುವ ಉಸ್ತುವಾರಿ ಅಲ್ಲ, ತಿಂಗಳಲ್ಲಿ 2-3 ಬಾರಿ ಮಂಗಳೂರಿಗೆ ಬರುತ್ತೇನೆ. ಒಂದು ಫೋನ್ ಮಾಡಬಹುದಿತ್ತಲ್ವಾ.. ಶಾಸಕನ ನಡೆಯಿಂದ ಮುಜುಗರ ಸೃಷ್ಟಿ ಆಗಿದೆ ಎಂದು ಹೇಳಿದರು.
ಉದ್ಘಾಟನೆಯನ್ನು ಸೂಚಿಸುವ ಕಲ್ಲಿನಲ್ಲೂ ಇವರದೇ ಹೆಸರು ಹಾಕಿದ್ದಾರೆ. ಇಷ್ಟೆಲ್ಲ ಆಗುವಾಗ ಅಧಿಕಾರಿಗಳು ಸುಮ್ಮನಿದ್ರಾ.. ಏನೂ ಗೊತ್ತೇ ಆಗಲಿಲ್ವಾ.. ಯಾಕೆ ನನ್ನ ಗಮನಕ್ಕೆ ತಂದಿಲ್ಲ. ಇದಕ್ಕೆ ಯಾರು ಕಾರಣ ಅಂತ ವರದಿ ಕೊಡಬೇಕು ಎಂದು ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗೆ ಸೂಚನೆ ನೀಡಿದರು. ಎಂಎಲ್ಸಿ ಐವಾನ್ ಡಿಸೋಜ, ಇಲ್ಲಿನ ಬಿಜೆಪಿ ಶಾಸಕರು ರಾಜಕೀಯದ ಸಣ್ಣತನ ತೋರಿಸಿದ್ದಾರೆ. ಇವತ್ತು ಕೂಡ ನಮ್ಮ ಶಾಸಕರು ಕಾರ್ಯಕ್ರಮಕ್ಕೆ ಬಂದಿಲ್ಲ, ಇದೇನಾ ಇವರು ಸರ್ಕಾರಿ ಕಾರ್ಯಕ್ರಮಕ್ಕೆ ಕೊಡುವ ಗೌರವ ಎಂದು ಪ್ರಶ್ನಿಸಿದರು.
Mangalore Inauguration of development works in Mangaladevi ward, minister Dinesh Gundurao slams Vedavyas Kamath. He said its a cheap politics by BJP to inaugurate the building without my knowledge. He also has instructed chief secretaries to take action against officials who violated the protocol during the inauguration of development works in Mangaladevi ward of the MCC.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm