ಬ್ರೇಕಿಂಗ್ ನ್ಯೂಸ್
15-02-25 11:01 pm Mangalore Correspondent ಕರಾವಳಿ
ಉಳ್ಳಾಲ, ಫೆ.15: ಹಿಂದೂ ಸಮಾಜದ ಐಕ್ಯತೆ, ಲೋಕ ಕಲ್ಯಾಣಾರ್ಥವಾಗಿ ಮಂಗಳೂರು ವಿಶ್ವ ಹಿಂದೂ ಪರಿಷತ್ ವತಿಯಿಂದ "ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ" ಬೃಹತ್ ಪಾದಯಾತ್ರೆಯನ್ನು ಇದೇ ಮಾರ್ಚ್ 9ರ ಆದಿತ್ಯವಾರ ಬೆಳಗ್ಗೆ 6 ಗಂಟೆಗೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ವಿಹಿಂಪ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರವೀಣ್ ಕುತ್ತಾರು ಹೇಳಿದರು.
ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ನಾಲ್ಕು ವರ್ಷಗಳ ಹಿಂದೆ ಜಿಲ್ಲೆಯಾದ್ಯಂತ ಹಿಂದೂ ಧರ್ಮೀಯರ ನಂಬಿಕೆಯ ಕೊರಗಜ್ಜ ಸೇರಿದಂತೆ ಇತರ ಕಾರಣಿಕ ಕ್ಷೇತ್ರಗಳ ಕಾಣಿಕೆ ಹುಂಡಿಗಳಿಗೆ ಕಿಡಿಗೇಡಿಗಳು ಕಾಂಡೋಮ್ ಗಳನ್ನ ಹಾಕಿ ಅಪವಿತ್ರಗೊಳಿಸಿ ವಿಕೃತಿ ಮೆರೆದಿದ್ದರು. ವಿಕೃತಿ ಮೆರೆದಿದ್ದ ಕಿಡಿಗೇಡಿಗಳಿಗೆ ಕೊರಗಜ್ಜ ದೈವವೇ ಶಿಕ್ಷೆ ನೀಡುವಂತೆ ಸಂಕಲ್ಪ ನಡೆಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರು ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಿದ್ದರು. ಪಾದಯಾತ್ರೆ ನಡೆಸಿದ ಹತ್ತೇ ದಿವಸಗಳಲ್ಲಿ ಪವಾಡವೆಂಬಂತೆ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನ ಮಲಿನಗೊಳಿಸಿದ್ದ ಕಿಡಿಗೇಡಿಗಳು ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ದೈವ, ದೇವರುಗಳಿಗೆ ಅಪಚಾರ ಎಸಗಿದ್ದ ಕಿಡಿಗೇಡಿಗಳಲ್ಲಿ ಕೆಲವರು ಸತ್ತರೆ, ಮತ್ತೆ ಕೆಲವರು ಅನಾರೋಗ್ಯ ಪೀಡಿತರಾಗಿದ್ದಾರೆ.
ಈ ಬಾರಿ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಐದನೇ ವರ್ಷದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆ ಸಾಗಿ ಬರುವ ರಸ್ತೆಯ ನಿಗದಿತ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ, ತಂಪು ಪಾನೀಯ, ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆ ನಡೆಸಿ ದನಿದ ಭಕ್ತಾದಿಗಳೆಲ್ಲರಿಗೂ ಕುತ್ತಾರು ಕೊರಗಜ್ಜನ ಕ್ಷೇತ್ರದ ಬಳಿ ಬಿಸಿ ಗಂಜಿ ಊಟದ ವ್ಯವಸ್ಥೆ ಮಾಡಲಾಗಿದೆ.
ಕೊರಗಜ್ಜನ ಕ್ಷೇತ್ರದ ಬಳಿ ನಡೆಯಲಿರುವ ಪಾದಯಾತ್ರೆ ಸಮಾರೋಪದ ಧಾರ್ಮಿಕ ಸಭೆಯಲ್ಲಿ ಖ್ಯಾತ ಅಂಕಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬೃಹತ್ ಪಾದಯಾತ್ರೆಯಲ್ಲಿ 25,000ಕ್ಕೂ ಮಿಕ್ಕಿದ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಧಾರ್ಮಿಕ ಸಭೆಯ ಬಳಿಕ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಹಾಗೂ ತಂಡದಿಂದ "ಶ್ರೀ ಸ್ವಾಮಿ ಕೊರಗಜ್ಜ" ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದರು.
ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರದ ಟ್ರಸ್ಟಿ ದೇವಿಪ್ರಸಾದ್ ಶೆಟ್ಟಿ, ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
5th year padayatra to koragajja adisthala kuthar in Mangalore. Chakravarti Sulibele will also be a part of this event.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm