ಬ್ರೇಕಿಂಗ್ ನ್ಯೂಸ್
09-08-20 09:53 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 9: ಪುತ್ತೂರಿನ ಬಿರುಮಲೆ ಗುಡ್ಡೆಯಲ್ಲಿ ಅನ್ಯಕೋಮಿನ ಯುವಕರೊಂದಿಗೆ ಮಂಗಳೂರಿನ ಯುವತಿ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಯುವಕರು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಎರಡು ದಿನ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲಿನ 17 ವರ್ಷದ ಯುವತಿಯನ್ನು ಆರೋಪಿ ಯುವಕರು ಸೇರಿ ಅಪಹರಿಸಿದ ಬಗ್ಗೆ ಆಕೆಯ ತಂದೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧಿಸಿ ಪೊಲೀಸರು ಮಹಮ್ಮದ್ ನಯೀಮ್, ಮಹಮ್ಮದ್ ತಾಸೀರ್, ಇಮ್ರಾನ್ ಎಂದು ಮೂವರನ್ನು ಬಂಧಿಸಿದ್ದು ಉಳಿದವರ ಬಂಧನಕ್ಕೆ ಬಲೆಬೀಸಿದ್ದಾರೆ.
ಯುವತಿಯ ತಂದೆಯ ದೂರಿನ ಪ್ರಕಾರ, 17 ವರ್ಷದ ಬಾಲಕಿ ಆಗಸ್ಟ್ 7ರಂದು ಸಂಜೆ 7 ಗಂಟೆಗೆ ತನ್ನ ಮನೆಯಿಂದ ಮಂಗಳೂರಿನ ಎಂಪಾಯರ್ ಮಾಲ್ ಗೆ ಹೋಗಿ ಬರುತ್ತೇನೆಂದು ಹೋದವಳು ರಾತ್ರಿಯಾದರೂ ಮನೆಗೆ ಬಂದಿಲ್ಲ. ಎಲ್ಲೆಡೆ ವಿಚಾರಿಸಿ ಹುಡುಕಿದರೂ ಮಗಳು ಪತ್ತೆಯಾಗಿಲ್ಲ. ಮಗಳ ಹುಡುಕಾಟದಲ್ಲಿ ಇರುವಾಗಲೇ ಆಕೆ ಪುತ್ತೂರಿನ ಬೀರಮಲೆ ಗುಡ್ಡೆಯಲ್ಲಿ ಇರುವುದಾಗಿ ಆಗಸ್ಟ್ 08 ರಂದು ಬೆಳಗ್ಗೆ ಗೊತ್ತಾಗಿದೆ. ಅದರಂತೆ ಮಧ್ಯಾಹ್ನ ಪುತ್ತೂರಿನ ಬೀರಮಲೆಗುಡ್ಡೆಗೆ ಬಂದು ಪರಿಶೀಲಿಸಿದಾಗ ಮಗಳು ಆರೋಪಿಗಳ ಜೊತೆ ಕಾರಿನಲ್ಲಿ (ನಂಬ್ರ ಕೆಎಲ್-57 ಪಿ-4414 ) ಪತ್ತೆಯಾಗಿದ್ದಾಳೆ ಎಂದು ಯುವತಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.
“ರಾತ್ರಿ ಬಿಜೈ ಬಳಿ ಒಂದು ಪ್ಲಾಟ್ ಗೆ ಮಗಳನ್ನು ಒತ್ತಾಯದಿಂದ ಕರೆದುಕೊಂಡು ಹೋಗಿ ಪಾರ್ಟಿ ಮಾಡಿ ರಾತ್ರಿ ಅಲ್ಲೇ ಉಳಿಸಿಕೊಂಡಿದ್ದಾರೆ. ಮರುದಿನ ಬೆಳಗ್ಗೆ 9 ಗಂಟೆಗೆ ಮಗಳು ಮನೆಗೆ ಹೋಗುತ್ತೇನೆಂದರೂ ಬಿಡದೆ ಪುತ್ತೂರಿನಲ್ಲಿ ಸ್ನೇಹಿತೆಯನ್ನು ಭೇಟಿಯಾಗಲಿದೆ ಎಂದು ಹೇಳಿ ಪುಸಲಾಯಿಸಿ ಪುತ್ತೂರಿನ ಪರ್ಲಡ್ಕ ಬಳಿಯ ಬೀರಮಲೆಗುಡ್ಡೆ ಎಂಬಲ್ಲಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ಯುವತಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಅಪ್ರಾಪ್ತೆ ಎಂದು ತಿಳಿದಿದ್ದರೂ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದಲೇ ಅಕ್ರಮವಾಗಿ ಕಾರಿನಲ್ಲಿ ಅಪಹರಿಸಿಕೊಂಡು ಪುತ್ತೂರಿನ ಬೀರಮಲೆಗುಡ್ಡೆಗೆ ಕರೆದುಕೊಂಡು ಬಂದಿದ್ದಾರೆ ಎಂದು ಅಪ್ರಾಪ್ತ ಬಾಲಕಿಯ ತಂದೆ ನೀಡಿದ ದೂರಿನಂತೆ ಪುತ್ತೂರಿನ ಮಹಿಳಾ ಠಾಣೆಯ ಪೊಲೀಸರು ಅಪಹರಣ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಕೇರಳ ಮೂಲದ್ದಾಗಿದ್ದು ಆರೋಪಿಗಳು ಎಲ್ಲಿಯವರೆಂದು ಗೊತ್ತಾಗಿಲ್ಲ. ಆದರೆ, ಆರೋಪಿಗಳು ಬಾಲಕಿಯನ್ನು ಕಿಡ್ನಾಪ್ ಮಾಡಿ ಗ್ಯಾಂಗ್ ರೇಪ್ ಮಾಡಿದ್ದು ಲವ್ ಜಿಹಾದ್ ಗುರಿ ಇರಿಸಿಕೊಂಡೇ ಇಂಥ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಸಮಗ್ರ ತನಿಖೆ ನಡೆಸಿದರಷ್ಟೇ ಈ ಜಾಲದ ಸತ್ಯಾಸತ್ಯತೆ ಹೊರಬಂದೀತು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am