ಬ್ರೇಕಿಂಗ್ ನ್ಯೂಸ್
16-12-20 10:42 pm Headline Karnataka News Network ಕರಾವಳಿ
ಮಂಜೇಶ್ವರ, ಡಿ.16: ಮಂಜೇಶ್ವರ ಬ್ಲಾಕ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಯುಡಿಎಫ್ ಸಮಬಲದ ಸಾಧನೆ ಮಾಡಿದ್ದು ಯಾರೇ ಅಧಿಕಾರ ಪಡೆಯಲು ಇತರೇ ಮಂದಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ.
ಯುಡಿಎಫ್ 6 ಸ್ಥಾನಗಳನ್ನು ಗೆದ್ದರೆ, ಬಿಜೆಪಿಯೂ ಅಷ್ಟೇ ಸ್ಥಾನಗಳನ್ನು ಗೆದ್ದುಕೊಂಡಿದೆ. ಬ್ಲಾಕ್ ಪಂಚಾಯತ್ ನಲ್ಲಿ ಎಲ್ ಡಿಎಫ್ ಅನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಇದೇ ಮೊದಲು. ಎಲ್ ಡಿಎಫ್ ಕೇವಲ 2 ಕಡೆ ಗೆಲುವು ಪಡೆದರೆ, ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಬಡಾಜೆ ಡಿವಿಷನ್ ನಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.


ಮುಳಿಗದ್ದೆ , ಪೆರ್ಮುದೆ, ಎಣ್ಮಕಜೆ, ಪೆರ್ಲ, ಮಜಿರ್ಪಳ್ಳ, ಕಡಂಬಾರು ಡಿವಿಷನ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಚ್ಲಾಂಗೋಡು, ಕುಂಜತ್ತೂರು, ಬಂದ್ಯೋಡು, ನಯಾಬಝಾರ್, ಉಪ್ಪಳ, ಮಂಜೇಶ್ವರ ಡಿವಿಷನ್ನಲ್ಲಿ ಯುಡಿಎಫ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವರ್ಕಾಡಿ ಮತ್ತು ಪುತ್ತಿಗೆ ಡಿವಿಷನ್ನಲ್ಲಿ ಎಲ್ ಡಿಎಫ್ ಗೆಲುವು ಸಾಧಿಸಿದೆ.
ಮಜೀರ್ಪಳ್ಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಈ ಹಿಂದೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹರ್ಷಾದ್ ವರ್ಕಾಡಿ ಅಚ್ಚರಿಯ ಸೋಲು ಕಂಡಿದ್ದಾರೆ. ಕಳೆದ ಬಾರಿ ಅವರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಹರ್ಷಾದ್ ವಿರುದ್ಧ ಈ ಬಾರಿ ಮೀಯಪದವು ನಿವಾಸಿ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಕೆ.ವಿ.ರಾಧಾಕೃಷ್ಣ ಗೆಲುವು ಸಾಧಿಸಿದ್ದಾರೆ. ಕಡಂಬಾರು ಕ್ಷೇತ್ರದಲ್ಲಿ ಬಿಜೆಪಿಯ ಅಶ್ವಿನಿ ಪಜ್ವ ಗೆದ್ದಿದ್ದಾರೆ.
ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಕಂಡಿರುವ ಬಿಜೆಪಿ ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಅಧಿಕಾರ ಪಡೆಯುವತ್ತ ಮುನ್ನುಗ್ಗಿದೆ. ಆದರೆ, ಅಧಿಕಾರ ಗಳಿಸುವುದು ಮಾತ್ರ ಕಷ್ಟದ ಕೆಲಸವೇ ಸರಿ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm