ಬ್ರೇಕಿಂಗ್ ನ್ಯೂಸ್
16-12-20 10:42 pm Headline Karnataka News Network ಕರಾವಳಿ
ಮಂಜೇಶ್ವರ, ಡಿ.16: ಮಂಜೇಶ್ವರ ಬ್ಲಾಕ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಯುಡಿಎಫ್ ಸಮಬಲದ ಸಾಧನೆ ಮಾಡಿದ್ದು ಯಾರೇ ಅಧಿಕಾರ ಪಡೆಯಲು ಇತರೇ ಮಂದಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ.
ಯುಡಿಎಫ್ 6 ಸ್ಥಾನಗಳನ್ನು ಗೆದ್ದರೆ, ಬಿಜೆಪಿಯೂ ಅಷ್ಟೇ ಸ್ಥಾನಗಳನ್ನು ಗೆದ್ದುಕೊಂಡಿದೆ. ಬ್ಲಾಕ್ ಪಂಚಾಯತ್ ನಲ್ಲಿ ಎಲ್ ಡಿಎಫ್ ಅನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಇದೇ ಮೊದಲು. ಎಲ್ ಡಿಎಫ್ ಕೇವಲ 2 ಕಡೆ ಗೆಲುವು ಪಡೆದರೆ, ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಬಡಾಜೆ ಡಿವಿಷನ್ ನಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.


ಮುಳಿಗದ್ದೆ , ಪೆರ್ಮುದೆ, ಎಣ್ಮಕಜೆ, ಪೆರ್ಲ, ಮಜಿರ್ಪಳ್ಳ, ಕಡಂಬಾರು ಡಿವಿಷನ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಚ್ಲಾಂಗೋಡು, ಕುಂಜತ್ತೂರು, ಬಂದ್ಯೋಡು, ನಯಾಬಝಾರ್, ಉಪ್ಪಳ, ಮಂಜೇಶ್ವರ ಡಿವಿಷನ್ನಲ್ಲಿ ಯುಡಿಎಫ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವರ್ಕಾಡಿ ಮತ್ತು ಪುತ್ತಿಗೆ ಡಿವಿಷನ್ನಲ್ಲಿ ಎಲ್ ಡಿಎಫ್ ಗೆಲುವು ಸಾಧಿಸಿದೆ.
ಮಜೀರ್ಪಳ್ಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಈ ಹಿಂದೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹರ್ಷಾದ್ ವರ್ಕಾಡಿ ಅಚ್ಚರಿಯ ಸೋಲು ಕಂಡಿದ್ದಾರೆ. ಕಳೆದ ಬಾರಿ ಅವರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಹರ್ಷಾದ್ ವಿರುದ್ಧ ಈ ಬಾರಿ ಮೀಯಪದವು ನಿವಾಸಿ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಕೆ.ವಿ.ರಾಧಾಕೃಷ್ಣ ಗೆಲುವು ಸಾಧಿಸಿದ್ದಾರೆ. ಕಡಂಬಾರು ಕ್ಷೇತ್ರದಲ್ಲಿ ಬಿಜೆಪಿಯ ಅಶ್ವಿನಿ ಪಜ್ವ ಗೆದ್ದಿದ್ದಾರೆ.
ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಕಂಡಿರುವ ಬಿಜೆಪಿ ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಅಧಿಕಾರ ಪಡೆಯುವತ್ತ ಮುನ್ನುಗ್ಗಿದೆ. ಆದರೆ, ಅಧಿಕಾರ ಗಳಿಸುವುದು ಮಾತ್ರ ಕಷ್ಟದ ಕೆಲಸವೇ ಸರಿ.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am