ಬ್ರೇಕಿಂಗ್ ನ್ಯೂಸ್
23-02-25 03:20 pm Mangalore Correspondent ಕರಾವಳಿ
ಮಂಗಳೂರು, ಫೆ.23: ಪಿಕಪ್ ವಾಹನದ ಧಾವಂತಕ್ಕೆ ಹಿಂಬದಿಗೆ ಡಿಕ್ಕಿಯಾಗಿದ್ದರಿಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಹರಿದಿದ್ದು ಓರ್ವ ಯುವಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪು ಗೌಡ(45) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕರಟಗಿಯ ಪ್ರದೀಪ್ ಕೊಲ್ಕಾರ್(35), ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್(37) ಗಂಭೀರ ಗಾಯಗೊಂಡಿದ್ದಾರೆ. ಕುಳಾಯಿ ಹೆದ್ದಾರಿ ಬದಿಯ ಶಂಕರ ಭವನ ಹೋಟೆಲ್ ನಲ್ಲಿ ಮೂವರು ಊಟ ಮುಗಿಸಿಕೊಂಡು ರಾಹೆ 66 ದಾಟುತ್ತಿದ್ದಾಗ ಕಾರು ಜವರಾಯನಂತೆ ಬಂದೆರಗಿದೆ.

ಉಡುಪಿ ಕಡೆಯಿಂದ ಬಂದ KA-19-AA-0746 ನಂಬರ್ನ ಪಿಕಪ್ ವಾಹನ ಮುಂದಿನಿಂದ ಸಾಗುತ್ತಿದ್ದ ಕಾರಿನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ರಸ್ತೆಯ ಎಡ ಬದಿಗೆ ತಳ್ಳಲ್ಪಟ್ಟು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದೀಪು ಗೌಡ, ಪ್ರದೀಪ್ ಮತ್ತು ನಾಗರಾಜ್ ಎಂಬವರಿಗೆ ಡಿಕ್ಕಿಯಾಗಿದೆ. ಈ ವೇಳೆ, ಪ್ರದೀಪ್ ಮತ್ತು ನಾಗರಾಜ್ ರಸ್ತೆಗೆ ಎಸೆಯಲ್ಪಟ್ಟರೆ, ದೀಪು ಗೌಡ ಅವರನ್ನು ಕಾರು ತಳ್ಳಿಕೊಂಡು ಸಾಗಿದೆ. ದೀಪು ಗೌಡ ತಲೆಗೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರದೀಪ್ ಮತ್ತು ನಾಗರಾಜ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident at surathkal, Pickup van rams over pedestrians, two injured, 45 year old killed. The deceased dhas been identified as Deepu Gowda native of Raichur.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm