ಬ್ರೇಕಿಂಗ್ ನ್ಯೂಸ್
23-02-25 03:20 pm Mangalore Correspondent ಕರಾವಳಿ
ಮಂಗಳೂರು, ಫೆ.23: ಪಿಕಪ್ ವಾಹನದ ಧಾವಂತಕ್ಕೆ ಹಿಂಬದಿಗೆ ಡಿಕ್ಕಿಯಾಗಿದ್ದರಿಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಹರಿದಿದ್ದು ಓರ್ವ ಯುವಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪು ಗೌಡ(45) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕರಟಗಿಯ ಪ್ರದೀಪ್ ಕೊಲ್ಕಾರ್(35), ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್(37) ಗಂಭೀರ ಗಾಯಗೊಂಡಿದ್ದಾರೆ. ಕುಳಾಯಿ ಹೆದ್ದಾರಿ ಬದಿಯ ಶಂಕರ ಭವನ ಹೋಟೆಲ್ ನಲ್ಲಿ ಮೂವರು ಊಟ ಮುಗಿಸಿಕೊಂಡು ರಾಹೆ 66 ದಾಟುತ್ತಿದ್ದಾಗ ಕಾರು ಜವರಾಯನಂತೆ ಬಂದೆರಗಿದೆ.

ಉಡುಪಿ ಕಡೆಯಿಂದ ಬಂದ KA-19-AA-0746 ನಂಬರ್ನ ಪಿಕಪ್ ವಾಹನ ಮುಂದಿನಿಂದ ಸಾಗುತ್ತಿದ್ದ ಕಾರಿನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ರಸ್ತೆಯ ಎಡ ಬದಿಗೆ ತಳ್ಳಲ್ಪಟ್ಟು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದೀಪು ಗೌಡ, ಪ್ರದೀಪ್ ಮತ್ತು ನಾಗರಾಜ್ ಎಂಬವರಿಗೆ ಡಿಕ್ಕಿಯಾಗಿದೆ. ಈ ವೇಳೆ, ಪ್ರದೀಪ್ ಮತ್ತು ನಾಗರಾಜ್ ರಸ್ತೆಗೆ ಎಸೆಯಲ್ಪಟ್ಟರೆ, ದೀಪು ಗೌಡ ಅವರನ್ನು ಕಾರು ತಳ್ಳಿಕೊಂಡು ಸಾಗಿದೆ. ದೀಪು ಗೌಡ ತಲೆಗೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರದೀಪ್ ಮತ್ತು ನಾಗರಾಜ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident at surathkal, Pickup van rams over pedestrians, two injured, 45 year old killed. The deceased dhas been identified as Deepu Gowda native of Raichur.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am