ಬ್ರೇಕಿಂಗ್ ನ್ಯೂಸ್
26-02-25 10:15 pm Mangalore Correspondent ಕರಾವಳಿ
ಮಂಗಳೂರು, ಫೆ.26: ಎರಡು ದಿನಗಳ ಹಿಂದೆ ಫೆ.24ರಂದು ಕುತ್ತಾರಿನಲ್ಲಿ ಕೆಲಸ ಇದೆಯೆಂದು ಹೇಳಿ ಕೋಣಾಜೆ ಗ್ರಾಮದ ತನ್ನ ಮನೆಯಿಂದ ತೆರಳಿದ್ದ ಮಹಮ್ಮದ್ ಆಸಿಫ್ (38) ಎಂಬವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಕೋಣಾಜೆ ಠಾಣೆಗೆ ದೂರು ನೀಡಲಾಗಿದೆ.
ಮಹಮ್ಮದ್ ಆಸಿಫ್ ಈ ಹಿಂದೆ ಮೂರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ಸಿದ್ಲಿಪುರ ಎಂಬಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಎಂಟು ತಿಂಗಳ ಹಿಂದೆ ಇವರಿಗೆ ಮದುವೆಯಾಗಿತ್ತು. ಶಿವಮೊಗ್ಗದಲ್ಲಿ ಮಂಗಳೂರು ಮೂಲದ ಅಬ್ದುಲ್ ಅಜೀಜ್ ಎಂಬವರಿಗೆ ಸೇರಿದ ಕೆಐ ಕನೆಕ್ಷನ್ ಎಂಬವರ ಕಂಪನಿಯಲ್ಲಿ ಕಟ್ಟಡ ಕೆಲಸ ಮಾಡಿಕೊಂಡಿದ್ದರು. ಇತ್ತೀಚೆಗೆ ಇವರಿಗೆ ಮದುವೆಯಾಗಿ ಅಲ್ಲಿ ಹೋಗಿ ಬರುವುದಕ್ಕೆ ಸಮಸ್ಯೆ ಆಗಿದ್ದರಿಂದ ಕುತ್ತಾರಿನಲ್ಲಿ ಇದೇ ಕಂಪನಿಯ ಕಟ್ಟಡ ಕೆಲಸ ಇದ್ದುದರಿಂದ ಅಲ್ಲಿ ದುಡಿಯುವುದಕ್ಕೆ ಸೂಚಿಸಲಾಗಿತ್ತು.
ಅದರಂತೆ, ಹತ್ತು ದಿನಗಳಿಂದ ಕುತ್ತಾರಿನಲ್ಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಆದರೆ ಫೆ.24ರಂದು ಬೆಳಗ್ಗೆ ಕುತ್ತಾರಿಗೆ ಕೆಲಸಕ್ಕೆಂದು ತೆರಳಿದವರು ಮರಳಿ ಬಂದಿಲ್ಲ. ಹೀಗಾಗಿ ಈತನ ತಮ್ಮ ಕೋಣಾಜೆ ಠಾಣೆಗೆ ಬಂದು ನಾಪತ್ತೆ ದೂರು ನೀಡಿದ್ದಾರೆ. ಪೊಲೀಸರು ಮೊಬೈಲ್ ಲೊಕೇಶನ್ ನೋಡಿದಾಗ, ಕೊನೆಯ ಬಾರಿಗೆ ಶಿವಮೊಗ್ಗದಲ್ಲಿ ಕಾಣಿಸಿದ್ದು ಆನಂತರ ಸ್ವಿಚ್ ಆಫ್ ಆಗಿದೆ. ಹೀಗಾಗಿ ಯಾರಾದರೂ ಮಹಮ್ಮದ್ ಆಸಿಫ್ ನನ್ನು ನೋಡಿದರೆ 0824-2220800, 220536 ಅಥವಾ 9480802350 ನಂಬರಿಗೆ ಕರೆ ಮಾಡಿ ತಿಳಿಸಲು ಕೋಣಾಜೆ ಪೊಲೀಸರು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ
ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ (17) ನಾಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಫೆ.25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ದೇವಸ್ಥಾನಕ್ಕೂ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ. ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
The Mangalore Police are seeking public assistance in locating two missing individuals: Mohammad Asif (38 years old) - Last seen in Konaje. Diganth (17 years old) - A student pursuing his PUC, last seen in Farangipete.
If you have any information regarding their whereabouts, please contact the authorities.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm